ಬ್ರೇಕಿಂಗ್ ನ್ಯೂಸ್
24-05-21 11:27 am Headline Karnataka News Network ಕರ್ನಾಟಕ
ಬಾಗಲಕೋಟೆ, ಮೇ 24 : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಟ್ಟಹಾಸದ ಭೀತಿ ಮೂಡಿಸುತ್ತಿದ್ದರೆ, ಲಸಿಕೆಗೆ ಒಂದೇ ಬಾರಿಗೆ ಬೇಡಿಕೆ ಕಾಣಿಸಿಕೊಂಡು ಲಸಿಕೆಯೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲೇ ಈಗಾಗ್ಲೇ ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ಪ್ರಮಾಣ ಮತ್ತು ಸಾವು ಸಂಭವಿಸುತ್ತಿರುವ ಪ್ರಮಾಣದ ವಿಚಾರದಲ್ಲಿ ತಜ್ಞರು ಅಧ್ಯಯನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಿಟಿ ಸ್ಕ್ಯಾನ್ ವೈದ್ಯರು ಸೇರಿ ನಡೆಸಿದ ಅಧ್ಯಯನದಲ್ಲಿ ಲಸಿಕೆ ಪಡೆದವರಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆ. ಅಷ್ಟೇ ಅಲ್ಲ, ಲಸಿಕೆ ಪಡೆದವರ ಜೀವ ಬಹುತೇಕ ಸೇಫ್ ಎನ್ನುವ ವಿಚಾರವನ್ನು ವೈದ್ಯರು ಕಂಡುಕೊಂಡಿದ್ದಾರೆ.
ಎರಡನೇ ಅಲೆಯಲ್ಲಿ ಕೊರೊನಾ ಪತ್ತೆಗಾಗಿ ಸಿಟಿ ಸ್ಕ್ಯಾನ್ ಮಾಡಿಸಿದ ಸೋಂಕಿತರ ಮಾಹಿತಿ ಸಂಗ್ರಹಿಸಿ, ತಾಳೆಹಾಕಿ ನೋಡಿದಾಗ ಈ ವಿಚಾರ ಕಂಡುಬಂದಿದೆ.

ಸಿಟಿ ಸ್ಕ್ಯಾನ್ ಮಾಡಿಸಿದ ಒಂದು ಸಾವಿರ ಜನರ ಮಾಹಿತಿ ಪಡೆದು, ಅವರಲ್ಲಿ ಸೋಂಕಿನ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಒಂದು ಸಾವಿರ ಜನರಲ್ಲಿ ಸೋಂಕು ಕಾಣಿಸಿದ್ದ ಶೇ. 75 ಜನರು ವ್ಯಾಕ್ಸಿನ್ ಹಾಕಿಸಿಕೊಂಡಿರಲಿಲ್ಲ. ಅಲ್ಲದೆ, ಸೋಂಕು ಕಾಣಿಸಿದ ಶೇ.25 ಜನರು ಸಿಂಗಲ್ ಡೋಸ್ ಪಡೆದಿದ್ದರು. ಎರಡು ಡೋಸ್ ಪಡೆದವರ ಪೈಕಿ ಶೇ.5ರಷ್ಟು ಜನರಲ್ಲಿ ಮಾತ್ರ ಸೋಂಕು ಬಂದಿರುವುದು ಕಂಡುಬಂದಿದೆ.
ಇದಲ್ಲದೆ, ಎರಡು ಡೋಸ್ ಪಡೆದ ಸೋಂಕಿತರಲ್ಲಿ ಲಂಗ್ಸ್ ಡ್ಯಾಮೇಜ್ ತೀರಾ ಕಡಿಮೆ ಇರುವುದು ಕಂಡುಬಂದಿದೆ. ಎರಡು ಡೋಜ್ ಲಸಿಕೆ ಪಡೆದವರಲ್ಲಿ ಕೆಲವರಲ್ಲಿ ಸೋಂಕು ಕಾಣಿಸಿದರೂ ಸಾವು ತಡೆದಿದೆ ಎನ್ನುವ ಅಂಶ ಅಧ್ಯಯನದಲ್ಲಿ ಹೊರಬಿದ್ದಿದೆ.

ಹಾಗಾಗಿ, ವ್ಯಾಕ್ಸಿನ್ ಪಡೆದವರ ಜೀವ ಸೇಫ್ ಎನ್ನುವುದು ಅಧ್ಯಯನದಲ್ಲಿ ಸಾಬೀತಾಗಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನರು ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ ತಜ್ಞರು.
ಈ ಬಾರಿ ಫ್ರಂಟ್ ಲೈನ್ ವಾರಿಯರ್ ಗಳು ಎರಡು ಡೋಜ್ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಡಂಗುರದ ನಡುವೆಯೂ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು ಕರೆ ನೀಡಿದ್ದಾರೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm