ಬ್ರೇಕಿಂಗ್ ನ್ಯೂಸ್
24-05-21 11:27 am Headline Karnataka News Network ಕರ್ನಾಟಕ
ಬಾಗಲಕೋಟೆ, ಮೇ 24 : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಟ್ಟಹಾಸದ ಭೀತಿ ಮೂಡಿಸುತ್ತಿದ್ದರೆ, ಲಸಿಕೆಗೆ ಒಂದೇ ಬಾರಿಗೆ ಬೇಡಿಕೆ ಕಾಣಿಸಿಕೊಂಡು ಲಸಿಕೆಯೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲೇ ಈಗಾಗ್ಲೇ ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ಪ್ರಮಾಣ ಮತ್ತು ಸಾವು ಸಂಭವಿಸುತ್ತಿರುವ ಪ್ರಮಾಣದ ವಿಚಾರದಲ್ಲಿ ತಜ್ಞರು ಅಧ್ಯಯನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಿಟಿ ಸ್ಕ್ಯಾನ್ ವೈದ್ಯರು ಸೇರಿ ನಡೆಸಿದ ಅಧ್ಯಯನದಲ್ಲಿ ಲಸಿಕೆ ಪಡೆದವರಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆ. ಅಷ್ಟೇ ಅಲ್ಲ, ಲಸಿಕೆ ಪಡೆದವರ ಜೀವ ಬಹುತೇಕ ಸೇಫ್ ಎನ್ನುವ ವಿಚಾರವನ್ನು ವೈದ್ಯರು ಕಂಡುಕೊಂಡಿದ್ದಾರೆ.
ಎರಡನೇ ಅಲೆಯಲ್ಲಿ ಕೊರೊನಾ ಪತ್ತೆಗಾಗಿ ಸಿಟಿ ಸ್ಕ್ಯಾನ್ ಮಾಡಿಸಿದ ಸೋಂಕಿತರ ಮಾಹಿತಿ ಸಂಗ್ರಹಿಸಿ, ತಾಳೆಹಾಕಿ ನೋಡಿದಾಗ ಈ ವಿಚಾರ ಕಂಡುಬಂದಿದೆ.

ಸಿಟಿ ಸ್ಕ್ಯಾನ್ ಮಾಡಿಸಿದ ಒಂದು ಸಾವಿರ ಜನರ ಮಾಹಿತಿ ಪಡೆದು, ಅವರಲ್ಲಿ ಸೋಂಕಿನ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಒಂದು ಸಾವಿರ ಜನರಲ್ಲಿ ಸೋಂಕು ಕಾಣಿಸಿದ್ದ ಶೇ. 75 ಜನರು ವ್ಯಾಕ್ಸಿನ್ ಹಾಕಿಸಿಕೊಂಡಿರಲಿಲ್ಲ. ಅಲ್ಲದೆ, ಸೋಂಕು ಕಾಣಿಸಿದ ಶೇ.25 ಜನರು ಸಿಂಗಲ್ ಡೋಸ್ ಪಡೆದಿದ್ದರು. ಎರಡು ಡೋಸ್ ಪಡೆದವರ ಪೈಕಿ ಶೇ.5ರಷ್ಟು ಜನರಲ್ಲಿ ಮಾತ್ರ ಸೋಂಕು ಬಂದಿರುವುದು ಕಂಡುಬಂದಿದೆ.
ಇದಲ್ಲದೆ, ಎರಡು ಡೋಸ್ ಪಡೆದ ಸೋಂಕಿತರಲ್ಲಿ ಲಂಗ್ಸ್ ಡ್ಯಾಮೇಜ್ ತೀರಾ ಕಡಿಮೆ ಇರುವುದು ಕಂಡುಬಂದಿದೆ. ಎರಡು ಡೋಜ್ ಲಸಿಕೆ ಪಡೆದವರಲ್ಲಿ ಕೆಲವರಲ್ಲಿ ಸೋಂಕು ಕಾಣಿಸಿದರೂ ಸಾವು ತಡೆದಿದೆ ಎನ್ನುವ ಅಂಶ ಅಧ್ಯಯನದಲ್ಲಿ ಹೊರಬಿದ್ದಿದೆ.

ಹಾಗಾಗಿ, ವ್ಯಾಕ್ಸಿನ್ ಪಡೆದವರ ಜೀವ ಸೇಫ್ ಎನ್ನುವುದು ಅಧ್ಯಯನದಲ್ಲಿ ಸಾಬೀತಾಗಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನರು ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ ತಜ್ಞರು.
ಈ ಬಾರಿ ಫ್ರಂಟ್ ಲೈನ್ ವಾರಿಯರ್ ಗಳು ಎರಡು ಡೋಜ್ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಡಂಗುರದ ನಡುವೆಯೂ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು ಕರೆ ನೀಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm