ಬ್ರೇಕಿಂಗ್ ನ್ಯೂಸ್
24-05-21 11:54 am Headline Karnataka News Network ಕರ್ನಾಟಕ
Photo credits : publictv
ಮೈಸೂರು, ಮೇ 24 : ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಂದೆಯ ಮನೆಯಲ್ಲಿ ಸಿಕ್ಕ ಸುಮಾರು 6 ಲಕ್ಷ ಹಣ, ಮೊಬೈಲ್ ಇತರೆ ವಸ್ತುಗಳನ್ನು ತಲುಪಿಸಿ ಎಂದು ಹೇಳುವ ಮೂಲಕ ಹಣಕ್ಕಷ್ಟೇ ಬೆಲೆ ಕಟ್ಟಿದ್ದಾನೆ.
ಹೆಬ್ಬಾಳದಲ್ಲಿ ವ್ಯಕ್ತಿಯೊಬ್ಬರು ಕೊರೊನಾಗೆ ಬಲಿಯಾಗಿದ್ದರು. ಈ ಬಗ್ಗೆ ಸ್ಥಳೀಯ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಮೃತ ವ್ಯಕ್ತಿಯ ಮಗನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.
ಆದರೆ ಕೊರೊನಾ ಸೋಂಕಿಗೆ ಬಲಿಯಾದ ತಂದೆಯ ಮೃತ ದೇಹ ಪಡೆಯಲು ಮಗ ನಿರಾಕರಿಸಿದ್ದಾನೆ. ನೀವೇ ಅಂತ್ಯಕ್ರಿಯೆ ಮಾಡಿ ಮುಗಿಸಿ ಎಂದು ಫೋನ್ ಮಾಡಿದ ಪಾಲಿಕೆ ಸದಸ್ಯರಿಗೆ ತಿಳಿಸಿದ್ದಾರೆ.

ಆದರೆ ಫೋನ್ ಮಾಡಿದಾಗಲೇ ಮನೆಯಲ್ಲಿ ಹಣ, ಎಟಿಎಂ ಕಾರ್ಡ್, 3 ಮೊಬೈಲ್ ಇರುವ ವಿಚಾರವನ್ನು ಮಗನಿಗೆ ತಿಳಿಸಿದ್ದಾರೆ. ಹಣ ಇದ್ದರೆ ಮನೆಗೆ ತಂದು ಕೊಡಿ. ಆದರೆ ಶವ ಮಾತ್ರ ತೆಗೆದುಕೊಳ್ಳುವುದಿಲ್ಲ ಎಂದು ಮಗ ಹೇಳಿದ್ದಾನೆ.
ತಂದೆಯ ಶವ ಬೇಡ, ಆದರೆ ಅವರು ದುಡಿದ ಹಣ ಬೇಕು ಎನ್ನುವ ಮೂಲಕ ಜನ್ಮನೀಡಿದ ತಂದೆಗೇ ಅವಮಾನ ಮಾಡಿದ ಮಗನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
In a very shocking incident, a Father died of Covid-19 at the Hospital in Mysore but the son who heard the news of his father's death says we don't need his body we just need his Cash, Atm card.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm