ಬ್ರೇಕಿಂಗ್ ನ್ಯೂಸ್
28-08-20 05:36 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಹಿಳೆಯರಿಗಾಗಿಯೇ ಸಿದ್ದಪಡಿಸಿದ ರಾಜ್ಯದ ಮೊದಲ ಹೈಟೆಕ್ ಸ್ತ್ರೀ ಶೌಚಾಲಯ ಇಂದು ಲೋಕಾರ್ಪಣೆಯಾಗಿದೆ. ಬಸ್ ಶೌಚಾಲಯವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅನಾವರಣಗೊಳಿಸಿದರು. ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸಾಮಾಜಿಕ ಕಳಕಳಿ ( CSR ) ಯೋಜನೆಯಡಿ ಈ ಶೌಚಗೃಹದ ನಿರ್ಮಾಣದ ವೆಚ್ಚವನ್ನು ಭರಿಸಲಾಗಿದೆ.

ನಿಗಮದ ಮುಖ್ಯ ಕಾಳಜಿ ಮಹಿಳಾ ಸ್ವಾಸ್ಥ್ಯ ಸಮಾಜವಾಗಿದ್ದು ಆ ಹಿನ್ನೆಲೆಯಲ್ಲಿ ದೇಶದ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಇಂತಹ ಸುಸಜ್ಜಿತ ಶೌಚಾಲಯವನ್ನು ಅನುಪಯುಕ್ತ ಬಸ್ಸಿನಲ್ಲಿ ನಿರ್ಮಿಸಲಾಗಿದೆ. ನಿಗಮವು ಹಲವು ಮಹಿಳಾ ಸ್ನೇಹಿ ಉಪಕ್ರಮಗಳನ್ನು ಜಾರಿಗೆ ತಂದಿದ್ದು, ಬಸ್ ನಿಲ್ದಾಣ ಹಾಗೂ ಬಸ್ಸುಗಳನ್ನು ಮಹಿಳಾ ಸ್ನೇಹಿಯಾಗಿಸುವ ನಿಟ್ಟಿನಲ್ಲಿನ ಈ ಪ್ರಯತ್ನ ಮಾಡಲಾಗಿದೆ.
ಈ ಶೌಚಾಲಯದಲ್ಲಿ ಮಗುವಿಗೆ ಹಾಲುಣಿಸುವ ಸ್ಥಳ, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರ, ಇನ್ಸಿನೇರೇಟರ್, ಮಕ್ಕಳ ಡೈಪರ್ ಬದಲಿಸುವ ಸ್ಥಳ, ವಾಷ್ ಬೇಸಿನ್ಗಳು, ಸೆನ್ಸಾರ್ ದೀಪಗಳು, ಸೋಲಾರ್ ವಿದ್ಯುತ್ ದ್ವೀಪಗಳನ್ನ ಅಳವಡಿಸಲಾಗಿದೆ.
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿಗಮದ ಪ್ರಥಮ ಆದ್ಯತೆಯಾಗಿದ್ದು, ಕೊರೊನಾದ ಈ ಸಂದರ್ಭದಲ್ಲಿ, ಈ ಸ್ವಚ್ಛ ಹಾಗೂ ಸುಸಜ್ಜಿತ ಶೌಚಾಲಯ ಮಾದರಿಯಾಗಲಿದೆ. ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಕೆ ಎಸ್ಆರ್ಟಿಸಿಯ ಪ್ರಯತ್ನ ಶ್ಲಾಘನೀಯ ಎಂದು ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಹಾಗೂ ಇದೇ ರೀತಿಯಲ್ಲಿ ಅನುಪಯುಕ್ತ ಬಸ್ಗಳನ್ನ ವಿವಿಧ ಯೋಜನೆಗಳಿಗೆ ಉಪಯೋಗಿಸಲು ಸಲಹೆ ನೀಡಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm