ಬ್ರೇಕಿಂಗ್ ನ್ಯೂಸ್
28-08-20 05:36 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಹಿಳೆಯರಿಗಾಗಿಯೇ ಸಿದ್ದಪಡಿಸಿದ ರಾಜ್ಯದ ಮೊದಲ ಹೈಟೆಕ್ ಸ್ತ್ರೀ ಶೌಚಾಲಯ ಇಂದು ಲೋಕಾರ್ಪಣೆಯಾಗಿದೆ. ಬಸ್ ಶೌಚಾಲಯವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅನಾವರಣಗೊಳಿಸಿದರು. ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸಾಮಾಜಿಕ ಕಳಕಳಿ ( CSR ) ಯೋಜನೆಯಡಿ ಈ ಶೌಚಗೃಹದ ನಿರ್ಮಾಣದ ವೆಚ್ಚವನ್ನು ಭರಿಸಲಾಗಿದೆ.

ನಿಗಮದ ಮುಖ್ಯ ಕಾಳಜಿ ಮಹಿಳಾ ಸ್ವಾಸ್ಥ್ಯ ಸಮಾಜವಾಗಿದ್ದು ಆ ಹಿನ್ನೆಲೆಯಲ್ಲಿ ದೇಶದ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಇಂತಹ ಸುಸಜ್ಜಿತ ಶೌಚಾಲಯವನ್ನು ಅನುಪಯುಕ್ತ ಬಸ್ಸಿನಲ್ಲಿ ನಿರ್ಮಿಸಲಾಗಿದೆ. ನಿಗಮವು ಹಲವು ಮಹಿಳಾ ಸ್ನೇಹಿ ಉಪಕ್ರಮಗಳನ್ನು ಜಾರಿಗೆ ತಂದಿದ್ದು, ಬಸ್ ನಿಲ್ದಾಣ ಹಾಗೂ ಬಸ್ಸುಗಳನ್ನು ಮಹಿಳಾ ಸ್ನೇಹಿಯಾಗಿಸುವ ನಿಟ್ಟಿನಲ್ಲಿನ ಈ ಪ್ರಯತ್ನ ಮಾಡಲಾಗಿದೆ.
ಈ ಶೌಚಾಲಯದಲ್ಲಿ ಮಗುವಿಗೆ ಹಾಲುಣಿಸುವ ಸ್ಥಳ, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರ, ಇನ್ಸಿನೇರೇಟರ್, ಮಕ್ಕಳ ಡೈಪರ್ ಬದಲಿಸುವ ಸ್ಥಳ, ವಾಷ್ ಬೇಸಿನ್ಗಳು, ಸೆನ್ಸಾರ್ ದೀಪಗಳು, ಸೋಲಾರ್ ವಿದ್ಯುತ್ ದ್ವೀಪಗಳನ್ನ ಅಳವಡಿಸಲಾಗಿದೆ.
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿಗಮದ ಪ್ರಥಮ ಆದ್ಯತೆಯಾಗಿದ್ದು, ಕೊರೊನಾದ ಈ ಸಂದರ್ಭದಲ್ಲಿ, ಈ ಸ್ವಚ್ಛ ಹಾಗೂ ಸುಸಜ್ಜಿತ ಶೌಚಾಲಯ ಮಾದರಿಯಾಗಲಿದೆ. ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಕೆ ಎಸ್ಆರ್ಟಿಸಿಯ ಪ್ರಯತ್ನ ಶ್ಲಾಘನೀಯ ಎಂದು ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಹಾಗೂ ಇದೇ ರೀತಿಯಲ್ಲಿ ಅನುಪಯುಕ್ತ ಬಸ್ಗಳನ್ನ ವಿವಿಧ ಯೋಜನೆಗಳಿಗೆ ಉಪಯೋಗಿಸಲು ಸಲಹೆ ನೀಡಿದ್ದಾರೆ.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm