ಬ್ರೇಕಿಂಗ್ ನ್ಯೂಸ್
28-08-20 05:36 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಹಿಳೆಯರಿಗಾಗಿಯೇ ಸಿದ್ದಪಡಿಸಿದ ರಾಜ್ಯದ ಮೊದಲ ಹೈಟೆಕ್ ಸ್ತ್ರೀ ಶೌಚಾಲಯ ಇಂದು ಲೋಕಾರ್ಪಣೆಯಾಗಿದೆ. ಬಸ್ ಶೌಚಾಲಯವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅನಾವರಣಗೊಳಿಸಿದರು. ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸಾಮಾಜಿಕ ಕಳಕಳಿ ( CSR ) ಯೋಜನೆಯಡಿ ಈ ಶೌಚಗೃಹದ ನಿರ್ಮಾಣದ ವೆಚ್ಚವನ್ನು ಭರಿಸಲಾಗಿದೆ.

ನಿಗಮದ ಮುಖ್ಯ ಕಾಳಜಿ ಮಹಿಳಾ ಸ್ವಾಸ್ಥ್ಯ ಸಮಾಜವಾಗಿದ್ದು ಆ ಹಿನ್ನೆಲೆಯಲ್ಲಿ ದೇಶದ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಇಂತಹ ಸುಸಜ್ಜಿತ ಶೌಚಾಲಯವನ್ನು ಅನುಪಯುಕ್ತ ಬಸ್ಸಿನಲ್ಲಿ ನಿರ್ಮಿಸಲಾಗಿದೆ. ನಿಗಮವು ಹಲವು ಮಹಿಳಾ ಸ್ನೇಹಿ ಉಪಕ್ರಮಗಳನ್ನು ಜಾರಿಗೆ ತಂದಿದ್ದು, ಬಸ್ ನಿಲ್ದಾಣ ಹಾಗೂ ಬಸ್ಸುಗಳನ್ನು ಮಹಿಳಾ ಸ್ನೇಹಿಯಾಗಿಸುವ ನಿಟ್ಟಿನಲ್ಲಿನ ಈ ಪ್ರಯತ್ನ ಮಾಡಲಾಗಿದೆ.
ಈ ಶೌಚಾಲಯದಲ್ಲಿ ಮಗುವಿಗೆ ಹಾಲುಣಿಸುವ ಸ್ಥಳ, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರ, ಇನ್ಸಿನೇರೇಟರ್, ಮಕ್ಕಳ ಡೈಪರ್ ಬದಲಿಸುವ ಸ್ಥಳ, ವಾಷ್ ಬೇಸಿನ್ಗಳು, ಸೆನ್ಸಾರ್ ದೀಪಗಳು, ಸೋಲಾರ್ ವಿದ್ಯುತ್ ದ್ವೀಪಗಳನ್ನ ಅಳವಡಿಸಲಾಗಿದೆ.
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿಗಮದ ಪ್ರಥಮ ಆದ್ಯತೆಯಾಗಿದ್ದು, ಕೊರೊನಾದ ಈ ಸಂದರ್ಭದಲ್ಲಿ, ಈ ಸ್ವಚ್ಛ ಹಾಗೂ ಸುಸಜ್ಜಿತ ಶೌಚಾಲಯ ಮಾದರಿಯಾಗಲಿದೆ. ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಕೆ ಎಸ್ಆರ್ಟಿಸಿಯ ಪ್ರಯತ್ನ ಶ್ಲಾಘನೀಯ ಎಂದು ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಹಾಗೂ ಇದೇ ರೀತಿಯಲ್ಲಿ ಅನುಪಯುಕ್ತ ಬಸ್ಗಳನ್ನ ವಿವಿಧ ಯೋಜನೆಗಳಿಗೆ ಉಪಯೋಗಿಸಲು ಸಲಹೆ ನೀಡಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm