ಬ್ರೇಕಿಂಗ್ ನ್ಯೂಸ್
26-05-21 12:28 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 26: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಕೂಡ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕವೂ ಕೂಡ ಲಾಕ್ಡೌನ್ ಮುಂದುವರೆಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಮೇ 10ರಿಂದ 24ರವರೆಗಿದ್ದ ಲಾಕ್ಡೌನ್ ಅನ್ನು ಮತ್ತೆ 14 ದಿನಗಳ ಕಾಲ ಅಂದರೆ ಜೂನ್ 7ರವರೆಗೆ ವಿಸ್ತರಿಸಲಾಗಿತ್ತು, ಬೆಳಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಿಧಾನಗತಿಯಲ್ಲಿ ಬರುತ್ತಿದ್ದರೂ ಕೂಡ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ವಿಸ್ತರಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.
ಜೂನ್ 5ರಂದು ಸಭೆ:
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್ 5 ರಂದು ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಲಾಕ್ಡೌನ್ ಮುಂದುವರೆಸಲೇಬೇಕು ಇಲ್ಲವಾದರೆ ಕೊರೊನಾ ಕೊಂಡಿಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಹಲವು ತಜ್ಞರು ತಮ್ಮ ಅಭಿಪ್ರಾಯವನ್ನು ಸರ್ಕಾರದ ಮುಂದಿರಿಸಿದ್ದಾರೆ. ಜೂನ್ 5ರಂದು ಅಂತಿಮ ನಿರ್ಧಾರ ಹೊರಬೀಳಲಿದೆ.
ಸಾರಿಗೆ ಸಂಚಾರಕ್ಕೆ ಅನುಮತಿ:
ಬಿಎಂಟಿಸಿ, ಕೆಎಸ್ಆರ್ಟಿಸಿ, ಓಲಾ, ಆಟೋ ಸಂಚಾರಕ್ಕೆ ಅವಕಾಶ ನೀಡುವ ಸಾದ್ಯತೆ ಇದೆ, ಏ.50ರಷ್ಟು ಪ್ರಯಾಣಿಕರು ಮಾತ್ರ ಸಂಚಾರ ಮಾಡಲು ಅವಕಾಶ ನೀಡುವ ಸಾಧ್ಯತೆ ಇದೆ. ಮದುವೆಯಲ್ಲಿ 40 ಮಂದಿ, ಅಂತ್ಯ ಸಂಸ್ಕಾರದಲ್ಲಿ 10 ಮಂದಿಗೆ ಅವಕಾಶ ನೀಡುವ ಚಿಂತನೆಯೂ ಸರ್ಕಾರದಲ್ಲಿದೆ ಎಂದು ಹೇಳಲಾಗುತ್ತಿದೆ.
ಹೋಂ ಐಸೊಲೇಷನ್ ರದ್ದು ಮಾಡಲು ಚಿಂತನೆ:
ಹೋಂ ಐಸೊಲೇಷನ್ನಲ್ಲಿದ್ದರೆ ಮನೆಯವರೆಲ್ಲರಿಗೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ, ಮತ್ತೊಂದು ವಿಷಯವೇನೆಂದರೆ ಯಾವ ಪ್ರಮಾಣದಲ್ಲಿ ಸೋಂಕು ತಗುಲಿದೆ ಎನ್ನುವ ಕುರಿತು ವೈದ್ಯರಿಗೂ ತಿಳಿಯುವುದಿಲ್ಲ, ರೋಗಿಗಳು ಕಣ್ಮುಂದೆ ಇದ್ದಾಗ ಮಾತ್ರ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ, ಒಂದೊಮ್ಮೆ ಅನ್ಲಾಕ್ ಮಾಡಿದರೂ ಕೂಡ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಬಾರದು ಎನ್ನುವ ಒತ್ತಾಯವೂ ಕೇಳಿಬಂದಿದೆ.
If the number of coronavirus cases continues to drop further, the BS Yediyurappa-led Karnataka government may allow some relaxations in the statewide lockdown after June 7. If reports are to be believed, CM Yediyurappad has asked government officials and experts to prepare a plan for the lifting restrictions in a phased manner. The state is expected to witness unlocking in more than 3 phases.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm