ಬ್ರೇಕಿಂಗ್ ನ್ಯೂಸ್
26-05-21 01:30 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಮೇ 26 : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು, ಅವುಗಳು ಪ್ರಾಣಾಪಾಯಕ್ಕೆ ಸಿಲುಕಿದ ಅದಷ್ಟೋ ಸನ್ನಿವೇಶವನ್ನು ನಾವು ಓದಿದ್ದೇವೆ. ಆದರೆ ಸಾಮಾನ್ಯವಾಗಿ ಹಾವುಗಳು ನಾಡಿನಲ್ಲಿಯೂ ಆಗಾಗ ಕಾಣಸಿಗುತ್ತಿರುತ್ತದೆ. ಇದೇ ರೀತಿ ಸನ್ನಿವೇಶ ಇಂದು ಕೂಡ ನಡೆದಿದ್ದು, ಜಮೀನು ಸ್ವಚ್ಛಗೊಳಿಸುವ ವೇಳೆ ನಾಗರಹಾವಿನ ಮರಿಗಳು ಮತ್ತು ಮೊಟ್ಟೆಗಳು ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಓಬಳಾಪುರದಲ್ಲಿ ನಡೆದಿದೆ.
ಆರ್.ಕೆ.ಸ್ವಾಮಿ ಎಂಬುವರು ಜೆಸಿಬಿಯಿಂದ ಜಮೀನು ಸ್ವಚ್ಛಗೊಳಿಸುತ್ತಿದ್ದು, ಭೂಮಿಯನ್ನು ಸಮತಟ್ಟು ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಹಾವಿನ ಮರಿ ಮತ್ತು ಮೊಟ್ಟೆಗಳು ಕಂಡು ಬಂದಿವೆ.
ಕೂಡಲೇ ಈ ವಿಷಯದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಉರಗ ತಜ್ಞ ಶಿವು ಸ್ಥಳಕ್ಕೆ ಆಗಮಿಸಿದ್ದು, ನಾಗರಹಾವಿನ 21ಮರಿಗಳು ಮತ್ತು 25ಕ್ಕೂ ಹೆಚ್ಚು ಮೊಟ್ಟೆಗಳನ್ನು ಸಂರಕ್ಷಿಸಿದ್ದಾರೆ. ಬಳಿಕ ಅದೇ ಜಮೀನಿನಲ್ಲಿದ್ದ ಎರಡು ನಾಗರಹಾವುಗಳನ್ನು ಸಹ ಸೆರೆ ಹಿಡಿದಿದ್ದಾರೆ.
ಸದ್ಯ ಹಾವುಗಳು ಮತ್ತು ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ನಾಗರಹಾವು, ಮರಿ ಮತ್ತು ಮೊಟ್ಟೆ ಕಾಡಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿದ್ದಾರೆ. ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯದ ಒಂದು ಭಾಗದಲ್ಲಿ ಹಾವುಗಳು ಮತ್ತು ಮೊಟ್ಟೆಗಳನ್ನು ಒಟ್ಟಿಗೆ ಬಿಡುವ ಬಗ್ಗೆ ಚಿಂತನೆ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ತೀರ್ಮಾನ ಕೈಗೊಳ್ಳಲಿದ್ದಾರೆ.
Chitradurga 25 Snake Cobra eggs and 21 little snakes rescued. The forest officials are now planning to place them back to forest.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm