ಬ್ರೇಕಿಂಗ್ ನ್ಯೂಸ್
26-05-21 01:30 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಮೇ 26 : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು, ಅವುಗಳು ಪ್ರಾಣಾಪಾಯಕ್ಕೆ ಸಿಲುಕಿದ ಅದಷ್ಟೋ ಸನ್ನಿವೇಶವನ್ನು ನಾವು ಓದಿದ್ದೇವೆ. ಆದರೆ ಸಾಮಾನ್ಯವಾಗಿ ಹಾವುಗಳು ನಾಡಿನಲ್ಲಿಯೂ ಆಗಾಗ ಕಾಣಸಿಗುತ್ತಿರುತ್ತದೆ. ಇದೇ ರೀತಿ ಸನ್ನಿವೇಶ ಇಂದು ಕೂಡ ನಡೆದಿದ್ದು, ಜಮೀನು ಸ್ವಚ್ಛಗೊಳಿಸುವ ವೇಳೆ ನಾಗರಹಾವಿನ ಮರಿಗಳು ಮತ್ತು ಮೊಟ್ಟೆಗಳು ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಓಬಳಾಪುರದಲ್ಲಿ ನಡೆದಿದೆ.
ಆರ್.ಕೆ.ಸ್ವಾಮಿ ಎಂಬುವರು ಜೆಸಿಬಿಯಿಂದ ಜಮೀನು ಸ್ವಚ್ಛಗೊಳಿಸುತ್ತಿದ್ದು, ಭೂಮಿಯನ್ನು ಸಮತಟ್ಟು ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಹಾವಿನ ಮರಿ ಮತ್ತು ಮೊಟ್ಟೆಗಳು ಕಂಡು ಬಂದಿವೆ.
ಕೂಡಲೇ ಈ ವಿಷಯದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಉರಗ ತಜ್ಞ ಶಿವು ಸ್ಥಳಕ್ಕೆ ಆಗಮಿಸಿದ್ದು, ನಾಗರಹಾವಿನ 21ಮರಿಗಳು ಮತ್ತು 25ಕ್ಕೂ ಹೆಚ್ಚು ಮೊಟ್ಟೆಗಳನ್ನು ಸಂರಕ್ಷಿಸಿದ್ದಾರೆ. ಬಳಿಕ ಅದೇ ಜಮೀನಿನಲ್ಲಿದ್ದ ಎರಡು ನಾಗರಹಾವುಗಳನ್ನು ಸಹ ಸೆರೆ ಹಿಡಿದಿದ್ದಾರೆ.
ಸದ್ಯ ಹಾವುಗಳು ಮತ್ತು ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ನಾಗರಹಾವು, ಮರಿ ಮತ್ತು ಮೊಟ್ಟೆ ಕಾಡಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿದ್ದಾರೆ. ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯದ ಒಂದು ಭಾಗದಲ್ಲಿ ಹಾವುಗಳು ಮತ್ತು ಮೊಟ್ಟೆಗಳನ್ನು ಒಟ್ಟಿಗೆ ಬಿಡುವ ಬಗ್ಗೆ ಚಿಂತನೆ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ತೀರ್ಮಾನ ಕೈಗೊಳ್ಳಲಿದ್ದಾರೆ.
Chitradurga 25 Snake Cobra eggs and 21 little snakes rescued. The forest officials are now planning to place them back to forest.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm