ಬ್ರೇಕಿಂಗ್ ನ್ಯೂಸ್
26-05-21 01:30 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಮೇ 26 : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು, ಅವುಗಳು ಪ್ರಾಣಾಪಾಯಕ್ಕೆ ಸಿಲುಕಿದ ಅದಷ್ಟೋ ಸನ್ನಿವೇಶವನ್ನು ನಾವು ಓದಿದ್ದೇವೆ. ಆದರೆ ಸಾಮಾನ್ಯವಾಗಿ ಹಾವುಗಳು ನಾಡಿನಲ್ಲಿಯೂ ಆಗಾಗ ಕಾಣಸಿಗುತ್ತಿರುತ್ತದೆ. ಇದೇ ರೀತಿ ಸನ್ನಿವೇಶ ಇಂದು ಕೂಡ ನಡೆದಿದ್ದು, ಜಮೀನು ಸ್ವಚ್ಛಗೊಳಿಸುವ ವೇಳೆ ನಾಗರಹಾವಿನ ಮರಿಗಳು ಮತ್ತು ಮೊಟ್ಟೆಗಳು ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಓಬಳಾಪುರದಲ್ಲಿ ನಡೆದಿದೆ.
ಆರ್.ಕೆ.ಸ್ವಾಮಿ ಎಂಬುವರು ಜೆಸಿಬಿಯಿಂದ ಜಮೀನು ಸ್ವಚ್ಛಗೊಳಿಸುತ್ತಿದ್ದು, ಭೂಮಿಯನ್ನು ಸಮತಟ್ಟು ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಹಾವಿನ ಮರಿ ಮತ್ತು ಮೊಟ್ಟೆಗಳು ಕಂಡು ಬಂದಿವೆ.
ಕೂಡಲೇ ಈ ವಿಷಯದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಉರಗ ತಜ್ಞ ಶಿವು ಸ್ಥಳಕ್ಕೆ ಆಗಮಿಸಿದ್ದು, ನಾಗರಹಾವಿನ 21ಮರಿಗಳು ಮತ್ತು 25ಕ್ಕೂ ಹೆಚ್ಚು ಮೊಟ್ಟೆಗಳನ್ನು ಸಂರಕ್ಷಿಸಿದ್ದಾರೆ. ಬಳಿಕ ಅದೇ ಜಮೀನಿನಲ್ಲಿದ್ದ ಎರಡು ನಾಗರಹಾವುಗಳನ್ನು ಸಹ ಸೆರೆ ಹಿಡಿದಿದ್ದಾರೆ.
ಸದ್ಯ ಹಾವುಗಳು ಮತ್ತು ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ನಾಗರಹಾವು, ಮರಿ ಮತ್ತು ಮೊಟ್ಟೆ ಕಾಡಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿದ್ದಾರೆ. ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯದ ಒಂದು ಭಾಗದಲ್ಲಿ ಹಾವುಗಳು ಮತ್ತು ಮೊಟ್ಟೆಗಳನ್ನು ಒಟ್ಟಿಗೆ ಬಿಡುವ ಬಗ್ಗೆ ಚಿಂತನೆ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ತೀರ್ಮಾನ ಕೈಗೊಳ್ಳಲಿದ್ದಾರೆ.
Chitradurga 25 Snake Cobra eggs and 21 little snakes rescued. The forest officials are now planning to place them back to forest.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm