ಬ್ರೇಕಿಂಗ್ ನ್ಯೂಸ್
26-05-21 01:30 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಮೇ 26 : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು, ಅವುಗಳು ಪ್ರಾಣಾಪಾಯಕ್ಕೆ ಸಿಲುಕಿದ ಅದಷ್ಟೋ ಸನ್ನಿವೇಶವನ್ನು ನಾವು ಓದಿದ್ದೇವೆ. ಆದರೆ ಸಾಮಾನ್ಯವಾಗಿ ಹಾವುಗಳು ನಾಡಿನಲ್ಲಿಯೂ ಆಗಾಗ ಕಾಣಸಿಗುತ್ತಿರುತ್ತದೆ. ಇದೇ ರೀತಿ ಸನ್ನಿವೇಶ ಇಂದು ಕೂಡ ನಡೆದಿದ್ದು, ಜಮೀನು ಸ್ವಚ್ಛಗೊಳಿಸುವ ವೇಳೆ ನಾಗರಹಾವಿನ ಮರಿಗಳು ಮತ್ತು ಮೊಟ್ಟೆಗಳು ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಓಬಳಾಪುರದಲ್ಲಿ ನಡೆದಿದೆ.
ಆರ್.ಕೆ.ಸ್ವಾಮಿ ಎಂಬುವರು ಜೆಸಿಬಿಯಿಂದ ಜಮೀನು ಸ್ವಚ್ಛಗೊಳಿಸುತ್ತಿದ್ದು, ಭೂಮಿಯನ್ನು ಸಮತಟ್ಟು ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಹಾವಿನ ಮರಿ ಮತ್ತು ಮೊಟ್ಟೆಗಳು ಕಂಡು ಬಂದಿವೆ.
ಕೂಡಲೇ ಈ ವಿಷಯದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಉರಗ ತಜ್ಞ ಶಿವು ಸ್ಥಳಕ್ಕೆ ಆಗಮಿಸಿದ್ದು, ನಾಗರಹಾವಿನ 21ಮರಿಗಳು ಮತ್ತು 25ಕ್ಕೂ ಹೆಚ್ಚು ಮೊಟ್ಟೆಗಳನ್ನು ಸಂರಕ್ಷಿಸಿದ್ದಾರೆ. ಬಳಿಕ ಅದೇ ಜಮೀನಿನಲ್ಲಿದ್ದ ಎರಡು ನಾಗರಹಾವುಗಳನ್ನು ಸಹ ಸೆರೆ ಹಿಡಿದಿದ್ದಾರೆ.
ಸದ್ಯ ಹಾವುಗಳು ಮತ್ತು ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ನಾಗರಹಾವು, ಮರಿ ಮತ್ತು ಮೊಟ್ಟೆ ಕಾಡಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿದ್ದಾರೆ. ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯದ ಒಂದು ಭಾಗದಲ್ಲಿ ಹಾವುಗಳು ಮತ್ತು ಮೊಟ್ಟೆಗಳನ್ನು ಒಟ್ಟಿಗೆ ಬಿಡುವ ಬಗ್ಗೆ ಚಿಂತನೆ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ತೀರ್ಮಾನ ಕೈಗೊಳ್ಳಲಿದ್ದಾರೆ.
Chitradurga 25 Snake Cobra eggs and 21 little snakes rescued. The forest officials are now planning to place them back to forest.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm