ಬ್ರೇಕಿಂಗ್ ನ್ಯೂಸ್
26-05-21 03:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 26: ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ (104) ಹೃದಯಾಘಾತಕ್ಕೊಳಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇತ್ತೀಚೆಗೆ ಕೊರೊನಾ ಸೋಂಕಿತರಾಗಿ ಗುಣಮುಖರಾಗಿದ್ದ ಅವರನ್ನು ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ ಸೇರಿದಂತೆ ಹೃದಯ ಕಾಯಿಲೆಗಳಿದ್ದವು. ವಯೋಸಹಜ ಕಾಯಿಲೆಗಳಿದ್ದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ಮಧ್ನಾಹ್ನ ಅವರು ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಹದಿನೈದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕೊರೊನಾ ಸೋಂಕು ಇರುವುದು ಕಂಡುಬಂದಿತ್ತು. ಬಳಿಕ ಚೇತರಿಕೆ ಕಂಡಿದ್ದ ಅವರನ್ನು ಜಯನಗರದದಲ್ಲಿರುವ ನಿವಾಸಕ್ಕೆ ಸ್ಥಳಾಂತರ ಮಾಡಲಾಗಿತ್ತು. ಆದರೆ, ಮನೆಗೆ ತೆರಳಿದ ಒಂದು ದಿವಸದಲ್ಲಿ ಮತ್ತೆ ದೇಹಸ್ಥಿತಿ ದುರ್ಬಲಗೊಂಡಿದ್ದರಿಂದ ಮರಳಿ ಮೇ 14ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಎಂಬ ಪೂರ್ಣನಾಮ ಹೊಂದಿದ್ದ ಅವರು, ಆರಂಭದಲ್ಲಿ ಉಪನ್ಯಾಸಕರಾಗಿದ್ದು 1942ರ ಕ್ವಿಟ್ ಇಂಡಿಯಾ ಚಳವಳಿಯ ಸಂದರ್ಭ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದಲ್ಲದೆ, 14 ತಿಂಗಳ ಕಾಲ ಸೆರೆವಾಸ ಅನುಭವಿಸಿದ್ದರು. ಆಬಳಿಕ ಗಾಂಧಿ ಮಾರ್ಗದಲ್ಲಿ ನಡೆಯುತ್ತಾ ಹಲವು ಜನಪರ ಚಳವಳಿಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ಈ ಮಧ್ಯೆ ಪತ್ರಕರ್ತರಾಗಿಯೂ ಕೆಲಸ ಮಾಡಿದ್ದ ಅವರು ಹಲವು ಪತ್ರಿಕೆಗಳಿಗೆ ಬರೆದಿದ್ದರು. ಇಳಿವಯಸ್ಸಿನಲ್ಲಿಯೂ ಜನಪರ ವಿಚಾರಗಳಲ್ಲಿ ಭಾಗವಹಿಸುತ್ತಿದ್ದುದು, ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರತಿಕ್ರಿಯಿಸುತ್ತಿದ್ದುದು ಇಂದಿನ ಜನಾಂಗಕ್ಕೆ ಮಾದರಿ ಅನ್ನುವಂತಿದ್ದರು. ಬದುಕಿದ್ದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಅವರೊಬ್ಬರೇ ಸಮಾಜದಲ್ಲಿ ಧ್ವನಿಯಾಗಿದ್ದವರು.
ದೊರೆಸ್ವಾಮಿ ನಿಧನಕ್ಕೆ ಸಿಎಂ ಯಡಿಯೂರಪ್ಪ , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ , ಇಳಿವಯಸ್ಸಿನಲ್ಲೂ ದಣಿವರಿಯದೆ ಸಮಾಜದ ಪರ ಧ್ವನಿಯಾಗುತ್ತಿದ್ದ ದೊರೆಸ್ವಾಮಿ ಅವರ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಡಿಕೆಶಿ ಹೇಳಿದ್ದಾರೆ.
103-year-old HS Doreswamy had remained active, participating in various agitations over the years including the CAA protest in 2020. Over the decades, Doreswamy has been a constant figure at various civil rights struggles in Karnataka.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm