ಬ್ರೇಕಿಂಗ್ ನ್ಯೂಸ್
26-05-21 03:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 26: ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ (104) ಹೃದಯಾಘಾತಕ್ಕೊಳಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇತ್ತೀಚೆಗೆ ಕೊರೊನಾ ಸೋಂಕಿತರಾಗಿ ಗುಣಮುಖರಾಗಿದ್ದ ಅವರನ್ನು ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ ಸೇರಿದಂತೆ ಹೃದಯ ಕಾಯಿಲೆಗಳಿದ್ದವು. ವಯೋಸಹಜ ಕಾಯಿಲೆಗಳಿದ್ದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ಮಧ್ನಾಹ್ನ ಅವರು ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.




ಹದಿನೈದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕೊರೊನಾ ಸೋಂಕು ಇರುವುದು ಕಂಡುಬಂದಿತ್ತು. ಬಳಿಕ ಚೇತರಿಕೆ ಕಂಡಿದ್ದ ಅವರನ್ನು ಜಯನಗರದದಲ್ಲಿರುವ ನಿವಾಸಕ್ಕೆ ಸ್ಥಳಾಂತರ ಮಾಡಲಾಗಿತ್ತು. ಆದರೆ, ಮನೆಗೆ ತೆರಳಿದ ಒಂದು ದಿವಸದಲ್ಲಿ ಮತ್ತೆ ದೇಹಸ್ಥಿತಿ ದುರ್ಬಲಗೊಂಡಿದ್ದರಿಂದ ಮರಳಿ ಮೇ 14ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಎಂಬ ಪೂರ್ಣನಾಮ ಹೊಂದಿದ್ದ ಅವರು, ಆರಂಭದಲ್ಲಿ ಉಪನ್ಯಾಸಕರಾಗಿದ್ದು 1942ರ ಕ್ವಿಟ್ ಇಂಡಿಯಾ ಚಳವಳಿಯ ಸಂದರ್ಭ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದಲ್ಲದೆ, 14 ತಿಂಗಳ ಕಾಲ ಸೆರೆವಾಸ ಅನುಭವಿಸಿದ್ದರು. ಆಬಳಿಕ ಗಾಂಧಿ ಮಾರ್ಗದಲ್ಲಿ ನಡೆಯುತ್ತಾ ಹಲವು ಜನಪರ ಚಳವಳಿಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ಈ ಮಧ್ಯೆ ಪತ್ರಕರ್ತರಾಗಿಯೂ ಕೆಲಸ ಮಾಡಿದ್ದ ಅವರು ಹಲವು ಪತ್ರಿಕೆಗಳಿಗೆ ಬರೆದಿದ್ದರು. ಇಳಿವಯಸ್ಸಿನಲ್ಲಿಯೂ ಜನಪರ ವಿಚಾರಗಳಲ್ಲಿ ಭಾಗವಹಿಸುತ್ತಿದ್ದುದು, ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರತಿಕ್ರಿಯಿಸುತ್ತಿದ್ದುದು ಇಂದಿನ ಜನಾಂಗಕ್ಕೆ ಮಾದರಿ ಅನ್ನುವಂತಿದ್ದರು. ಬದುಕಿದ್ದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಅವರೊಬ್ಬರೇ ಸಮಾಜದಲ್ಲಿ ಧ್ವನಿಯಾಗಿದ್ದವರು.


ದೊರೆಸ್ವಾಮಿ ನಿಧನಕ್ಕೆ ಸಿಎಂ ಯಡಿಯೂರಪ್ಪ , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ , ಇಳಿವಯಸ್ಸಿನಲ್ಲೂ ದಣಿವರಿಯದೆ ಸಮಾಜದ ಪರ ಧ್ವನಿಯಾಗುತ್ತಿದ್ದ ದೊರೆಸ್ವಾಮಿ ಅವರ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಡಿಕೆಶಿ ಹೇಳಿದ್ದಾರೆ.
103-year-old HS Doreswamy had remained active, participating in various agitations over the years including the CAA protest in 2020. Over the decades, Doreswamy has been a constant figure at various civil rights struggles in Karnataka.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm