ಬ್ರೇಕಿಂಗ್ ನ್ಯೂಸ್
27-05-21 04:21 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27: ಬಿಜೆಪಿ ಶಾಸಕರಿಂದಲೇ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಜಿಂದಾಲ್ ಸಂಸ್ಥೆಗೆ ಬಳ್ಳಾರಿಯಲ್ಲಿ 3667 ಎಕ್ರೆ ಭೂಮಿ ನೀಡುವ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಈ ಹಿಂದಿನ ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಜಿಂದಾಲ್ ಸಂಸ್ಥೆಗೆ ಭೂಮಿ ನೀಡಲು ಒಪ್ಪಿಗೆ ನೀಡಿದ್ದು ವಿರೋಧಕ್ಕೆ ಕಾರಣವಾಗಿತ್ತು.



ಬಿಜೆಪಿ ಶಾಸಕರೇ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಸಿಎಂ ನಿರ್ಧಾರದ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯಂತೂ, ಜಿಂದಾಲ್ ಸಂಸ್ಥೆಗೆ ಭೂಮಿ ನೀಡುವ ವಿಚಾರದಲ್ಲಿ ಬಿಜೆಪಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಇದೀಗ ನಾವೇ ಅಧಿಕಾರದಲ್ಲಿರುವಾಗ 3500 ಕೋಟಿ ಬೆಲೆಯ ಭೂಮಿಯನ್ನು ಚಿಲ್ಲರೆ ಹಣಕ್ಕೆ ನೀಡುವುದು ಎಷ್ಟು ಸರಿ. ಈ ಬಗ್ಗೆ ಸ್ವತಃ ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದರು. ಬಳ್ಳಾರಿ ಮೂಲದ ಬಿಜೆಪಿ ಶಾಸಕ ಆನಂದ್ ಸಿಂಗ್ ಕೂಡ ಇದೇ ಮಾತು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ (ಇಂದು) ನಡೆಯುವ ಸಂಪುಟ ಸಭೆಗೆ ಮಹತ್ವ ಲಭಿಸಿತ್ತು.

ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಿಂದಾಲ್ ಸಂಸ್ಥೆಗೆ ಭೂಮಿ ನೀಡುವ ವಿಚಾರಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿಲ್ಲ. ಈ ವಿಚಾರದಲ್ಲಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದರಿಂದ ಸದ್ಯಕ್ಕೆ ತಡೆಹಿಡಿಯಲಾಗಿದೆ. ಆದರೆ, ಭವಿಷ್ಯದಲ್ಲಿ ಈ ಬಗ್ಗೆ ಏನಾಗಲಿದೆ ಎಂಬುದನ್ನು ಹೇಳುವಂತಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟ ರೀತಿ ಹೇಳಿಕೆ ನೀಡಿದ್ದಾರೆ.
ಮೇಕೆದಾಟು ಯೋಜನೆ ಸಂಬಂಧ ಎನ್ ಜಿಟಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಜಲಸಂಪನ್ಮೂಲ ಖಾತೆಯ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಭೆ ನಡೆಸಲಾಗಿದೆ. ಮಾಧ್ಯಮಗಳ ವರದಿ ನೋಡಿ ಎನ್ ಜಿಟಿ ಈ ಆದೇಶ ನೀಡಿದ್ದು ಅದನ್ನು ವಾಪಸ್ ಪಡೆಯಲು ಕೋರಲಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
BS Yediyurappa-led Karnataka Cabinet agreed to sell 3,667 acres of land to the Sajjan Jindal-led JSW Steel Ltd in Ballari has now come to hold after a cabinet meeting held today.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm