ಬ್ರೇಕಿಂಗ್ ನ್ಯೂಸ್
27-05-21 04:21 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27: ಬಿಜೆಪಿ ಶಾಸಕರಿಂದಲೇ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಜಿಂದಾಲ್ ಸಂಸ್ಥೆಗೆ ಬಳ್ಳಾರಿಯಲ್ಲಿ 3667 ಎಕ್ರೆ ಭೂಮಿ ನೀಡುವ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಈ ಹಿಂದಿನ ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಜಿಂದಾಲ್ ಸಂಸ್ಥೆಗೆ ಭೂಮಿ ನೀಡಲು ಒಪ್ಪಿಗೆ ನೀಡಿದ್ದು ವಿರೋಧಕ್ಕೆ ಕಾರಣವಾಗಿತ್ತು.



ಬಿಜೆಪಿ ಶಾಸಕರೇ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಸಿಎಂ ನಿರ್ಧಾರದ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯಂತೂ, ಜಿಂದಾಲ್ ಸಂಸ್ಥೆಗೆ ಭೂಮಿ ನೀಡುವ ವಿಚಾರದಲ್ಲಿ ಬಿಜೆಪಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಇದೀಗ ನಾವೇ ಅಧಿಕಾರದಲ್ಲಿರುವಾಗ 3500 ಕೋಟಿ ಬೆಲೆಯ ಭೂಮಿಯನ್ನು ಚಿಲ್ಲರೆ ಹಣಕ್ಕೆ ನೀಡುವುದು ಎಷ್ಟು ಸರಿ. ಈ ಬಗ್ಗೆ ಸ್ವತಃ ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದರು. ಬಳ್ಳಾರಿ ಮೂಲದ ಬಿಜೆಪಿ ಶಾಸಕ ಆನಂದ್ ಸಿಂಗ್ ಕೂಡ ಇದೇ ಮಾತು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ (ಇಂದು) ನಡೆಯುವ ಸಂಪುಟ ಸಭೆಗೆ ಮಹತ್ವ ಲಭಿಸಿತ್ತು.

ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಿಂದಾಲ್ ಸಂಸ್ಥೆಗೆ ಭೂಮಿ ನೀಡುವ ವಿಚಾರಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿಲ್ಲ. ಈ ವಿಚಾರದಲ್ಲಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದರಿಂದ ಸದ್ಯಕ್ಕೆ ತಡೆಹಿಡಿಯಲಾಗಿದೆ. ಆದರೆ, ಭವಿಷ್ಯದಲ್ಲಿ ಈ ಬಗ್ಗೆ ಏನಾಗಲಿದೆ ಎಂಬುದನ್ನು ಹೇಳುವಂತಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟ ರೀತಿ ಹೇಳಿಕೆ ನೀಡಿದ್ದಾರೆ.
ಮೇಕೆದಾಟು ಯೋಜನೆ ಸಂಬಂಧ ಎನ್ ಜಿಟಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಜಲಸಂಪನ್ಮೂಲ ಖಾತೆಯ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಭೆ ನಡೆಸಲಾಗಿದೆ. ಮಾಧ್ಯಮಗಳ ವರದಿ ನೋಡಿ ಎನ್ ಜಿಟಿ ಈ ಆದೇಶ ನೀಡಿದ್ದು ಅದನ್ನು ವಾಪಸ್ ಪಡೆಯಲು ಕೋರಲಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
BS Yediyurappa-led Karnataka Cabinet agreed to sell 3,667 acres of land to the Sajjan Jindal-led JSW Steel Ltd in Ballari has now come to hold after a cabinet meeting held today.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm