ಬ್ರೇಕಿಂಗ್ ನ್ಯೂಸ್
28-05-21 01:23 pm Headline Karnataka News Network ಕರ್ನಾಟಕ
ಶಿವಮೊಗ್ಗ, ಮೇ 28: ಕೊರೊನಾ ಪರಿಸ್ಥಿತಿ ನಿರ್ವಹಣೆಗೆ ಕುವೈತ್ ದೇಶದಿಂದ ಶಿವಮೊಗ್ಗಕ್ಕೆ 20 ಟನ್ ಆಕ್ಸಿಜನ್ ಸರಬರಾಜಾಗಿದೆ. ಮಂಗಳೂರಿನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರನ್ನು ಶಿವಮೊಗ್ಗದ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿಡಲಾಗಿದೆ.
ಕುವೈತ್ ದೇಶದಿಂದ ಹಡಗು ಮೂಲಕ ಆಕ್ಸಿಜನ್ ಕಂಟೈನರ್ಗಳು ಮಂಗಳೂರು ಬಂದರಿಗೆ ತಲುಪಿದ್ದವು. ಈ ಪೈಕಿ 20 ಟನ್ ಕಂಟೈನರ್ ಒಂದು ಶಿವಮೊಗ್ಗಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುವೈತ್ ದೇಶದಿಂದ ಬಂದಿರುವ ಆಕ್ಸಿಜನ್ನ್ನು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಇರುವ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿ ಇಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಪರ ಜಿಲ್ಲಾಧಿಕಾರಿ ಹಾಗೂ ಆಕ್ಸಿಜನ್ ನಿರ್ವಹಣೆ ವ್ಯವಸ್ಥೆಯ ನೋಡಲ್ ಅಧಿಕಾರಿ ಜಿ.ಅನುರಾಧ, "ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹಕ್ಕೆ ವ್ಯವಸ್ಥೆ ಇರದ ಕಾರಣ, ಜಿಲ್ಲೆಯಲ್ಲಿ ಎರಡು ಖಾಸಗಿ ಸಂಸ್ಥೆಗಳಲ್ಲಿ ಆಕ್ಸಿಜನ್ ಸಂಗ್ರಹ ಮಾಡಲಾಗುತ್ತಿದೆ. ಕುವೈತ್ನಿಂದ ಬಂದ ಆಕ್ಸಿಜನ್ನ್ನು ಖಾಸಗಿ ಸಂಸ್ಥೆಯಲ್ಲಿ ಸದ್ಯಕ್ಕೆ ಸಂಗ್ರಹಿಸಲಾಗಿದೆ'' ಎಂದರು.

ಸರ್ಕಾರಿ ಆಸ್ಪತ್ರೆಗೆ ಉಚಿತ ಆಕ್ಸಿಜನ್;
ಮೆಗ್ಗಾನ್ ಆಸ್ಪತ್ರೆಯಲ್ಲಿ 19 ಕೆಎಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಇದನ್ನು ಮೆಗ್ಗಾನ್ ಆಸ್ಪತ್ರೆಗೆ ಬಳಕೆ ಮಾಡಲಾಗುತ್ತಿದೆ. ಇನ್ನು, ವಿಐಎಸ್ಎಲ್ನಲ್ಲಿ ಉತ್ಪಾದನೆ ಆಗುತ್ತಿರುವುದನ್ನು ಜಂಬೋ ಸಿಲಿಂಡರ್ಗಳಲ್ಲಿ ಫಿಲ್ಲಿಂಗ್ ಮಾಡಿ, ಜಿಲ್ಲೆಯ ವಿವಿಧ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದರು.
ಈಗ ಬಂದಿರುವ ಆಕ್ಸಿಜನ್ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಬೇಡಿಕೆ ಸಲ್ಲಿಸಿದರೆ ನಿಗದಿತ ಹಣ ಪಡೆದು ಅವುಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತದೆ.
ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ;
ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ. ಅಕ್ಸಿಜನ್ ಬಳಕೆ ಪ್ರಮಾಣವೂ ಇಳಿಕೆಯಾಗುತ್ತಿದೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹ ಮಾಡಿಟ್ಟುಕೊಳ್ಳುವುದು ಆಡಳಿತಕ್ಕೆ ಅನಿವಾರ್ಯವಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದ್ದಾರೆ.
Read: ಕುವೈಟ್ ಭಾರತೀಯ ನಿವಾಸಿಗಳಿಂದ ಭಾರೀ ಪ್ರಮಾಣದ ನೆರವು ; 252 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ
The truck carrying an oxygen cryogenic container from Mangaluru reaches Shivamogga. The medical oxygen was donated by the government of the Kingdom of Kuwait to India.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 10:09 pm
HK News Staffer
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm