ಬ್ರೇಕಿಂಗ್ ನ್ಯೂಸ್
28-05-21 01:23 pm Headline Karnataka News Network ಕರ್ನಾಟಕ
ಶಿವಮೊಗ್ಗ, ಮೇ 28: ಕೊರೊನಾ ಪರಿಸ್ಥಿತಿ ನಿರ್ವಹಣೆಗೆ ಕುವೈತ್ ದೇಶದಿಂದ ಶಿವಮೊಗ್ಗಕ್ಕೆ 20 ಟನ್ ಆಕ್ಸಿಜನ್ ಸರಬರಾಜಾಗಿದೆ. ಮಂಗಳೂರಿನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರನ್ನು ಶಿವಮೊಗ್ಗದ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿಡಲಾಗಿದೆ.
ಕುವೈತ್ ದೇಶದಿಂದ ಹಡಗು ಮೂಲಕ ಆಕ್ಸಿಜನ್ ಕಂಟೈನರ್ಗಳು ಮಂಗಳೂರು ಬಂದರಿಗೆ ತಲುಪಿದ್ದವು. ಈ ಪೈಕಿ 20 ಟನ್ ಕಂಟೈನರ್ ಒಂದು ಶಿವಮೊಗ್ಗಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುವೈತ್ ದೇಶದಿಂದ ಬಂದಿರುವ ಆಕ್ಸಿಜನ್ನ್ನು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಇರುವ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿ ಇಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಪರ ಜಿಲ್ಲಾಧಿಕಾರಿ ಹಾಗೂ ಆಕ್ಸಿಜನ್ ನಿರ್ವಹಣೆ ವ್ಯವಸ್ಥೆಯ ನೋಡಲ್ ಅಧಿಕಾರಿ ಜಿ.ಅನುರಾಧ, "ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹಕ್ಕೆ ವ್ಯವಸ್ಥೆ ಇರದ ಕಾರಣ, ಜಿಲ್ಲೆಯಲ್ಲಿ ಎರಡು ಖಾಸಗಿ ಸಂಸ್ಥೆಗಳಲ್ಲಿ ಆಕ್ಸಿಜನ್ ಸಂಗ್ರಹ ಮಾಡಲಾಗುತ್ತಿದೆ. ಕುವೈತ್ನಿಂದ ಬಂದ ಆಕ್ಸಿಜನ್ನ್ನು ಖಾಸಗಿ ಸಂಸ್ಥೆಯಲ್ಲಿ ಸದ್ಯಕ್ಕೆ ಸಂಗ್ರಹಿಸಲಾಗಿದೆ'' ಎಂದರು.

ಸರ್ಕಾರಿ ಆಸ್ಪತ್ರೆಗೆ ಉಚಿತ ಆಕ್ಸಿಜನ್;
ಮೆಗ್ಗಾನ್ ಆಸ್ಪತ್ರೆಯಲ್ಲಿ 19 ಕೆಎಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಇದನ್ನು ಮೆಗ್ಗಾನ್ ಆಸ್ಪತ್ರೆಗೆ ಬಳಕೆ ಮಾಡಲಾಗುತ್ತಿದೆ. ಇನ್ನು, ವಿಐಎಸ್ಎಲ್ನಲ್ಲಿ ಉತ್ಪಾದನೆ ಆಗುತ್ತಿರುವುದನ್ನು ಜಂಬೋ ಸಿಲಿಂಡರ್ಗಳಲ್ಲಿ ಫಿಲ್ಲಿಂಗ್ ಮಾಡಿ, ಜಿಲ್ಲೆಯ ವಿವಿಧ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದರು.
ಈಗ ಬಂದಿರುವ ಆಕ್ಸಿಜನ್ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಬೇಡಿಕೆ ಸಲ್ಲಿಸಿದರೆ ನಿಗದಿತ ಹಣ ಪಡೆದು ಅವುಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತದೆ.
ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ;
ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ. ಅಕ್ಸಿಜನ್ ಬಳಕೆ ಪ್ರಮಾಣವೂ ಇಳಿಕೆಯಾಗುತ್ತಿದೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹ ಮಾಡಿಟ್ಟುಕೊಳ್ಳುವುದು ಆಡಳಿತಕ್ಕೆ ಅನಿವಾರ್ಯವಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದ್ದಾರೆ.
Read: ಕುವೈಟ್ ಭಾರತೀಯ ನಿವಾಸಿಗಳಿಂದ ಭಾರೀ ಪ್ರಮಾಣದ ನೆರವು ; 252 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ
The truck carrying an oxygen cryogenic container from Mangaluru reaches Shivamogga. The medical oxygen was donated by the government of the Kingdom of Kuwait to India.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
23-12-25 03:28 pm
HK News Desk
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
23-12-25 10:51 pm
Mangalore Correspondent
Sansad Khel Mahotsav Mangalore: ಮಂಗಳೂರಿನಲ್ಲಿ...
23-12-25 10:40 pm
Ullal, UT Khader, Mudipu KSRTC: ನಾಲೇಜ್ ಕಾರಿಡಾ...
23-12-25 10:23 pm
Mangalore Murder, Crime, Court: ಕೊಲೆ ಮಾಡಿದ್ದು...
23-12-25 10:12 pm
DGP Alok Kumar, Mangalore Jail: ಮಂಗಳೂರು ಜೈಲಿಗ...
23-12-25 10:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm