ಬ್ರೇಕಿಂಗ್ ನ್ಯೂಸ್
28-05-21 01:23 pm Headline Karnataka News Network ಕರ್ನಾಟಕ
ಶಿವಮೊಗ್ಗ, ಮೇ 28: ಕೊರೊನಾ ಪರಿಸ್ಥಿತಿ ನಿರ್ವಹಣೆಗೆ ಕುವೈತ್ ದೇಶದಿಂದ ಶಿವಮೊಗ್ಗಕ್ಕೆ 20 ಟನ್ ಆಕ್ಸಿಜನ್ ಸರಬರಾಜಾಗಿದೆ. ಮಂಗಳೂರಿನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರನ್ನು ಶಿವಮೊಗ್ಗದ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿಡಲಾಗಿದೆ.
ಕುವೈತ್ ದೇಶದಿಂದ ಹಡಗು ಮೂಲಕ ಆಕ್ಸಿಜನ್ ಕಂಟೈನರ್ಗಳು ಮಂಗಳೂರು ಬಂದರಿಗೆ ತಲುಪಿದ್ದವು. ಈ ಪೈಕಿ 20 ಟನ್ ಕಂಟೈನರ್ ಒಂದು ಶಿವಮೊಗ್ಗಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುವೈತ್ ದೇಶದಿಂದ ಬಂದಿರುವ ಆಕ್ಸಿಜನ್ನ್ನು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಇರುವ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿ ಇಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಪರ ಜಿಲ್ಲಾಧಿಕಾರಿ ಹಾಗೂ ಆಕ್ಸಿಜನ್ ನಿರ್ವಹಣೆ ವ್ಯವಸ್ಥೆಯ ನೋಡಲ್ ಅಧಿಕಾರಿ ಜಿ.ಅನುರಾಧ, "ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹಕ್ಕೆ ವ್ಯವಸ್ಥೆ ಇರದ ಕಾರಣ, ಜಿಲ್ಲೆಯಲ್ಲಿ ಎರಡು ಖಾಸಗಿ ಸಂಸ್ಥೆಗಳಲ್ಲಿ ಆಕ್ಸಿಜನ್ ಸಂಗ್ರಹ ಮಾಡಲಾಗುತ್ತಿದೆ. ಕುವೈತ್ನಿಂದ ಬಂದ ಆಕ್ಸಿಜನ್ನ್ನು ಖಾಸಗಿ ಸಂಸ್ಥೆಯಲ್ಲಿ ಸದ್ಯಕ್ಕೆ ಸಂಗ್ರಹಿಸಲಾಗಿದೆ'' ಎಂದರು.

ಸರ್ಕಾರಿ ಆಸ್ಪತ್ರೆಗೆ ಉಚಿತ ಆಕ್ಸಿಜನ್;
ಮೆಗ್ಗಾನ್ ಆಸ್ಪತ್ರೆಯಲ್ಲಿ 19 ಕೆಎಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಇದನ್ನು ಮೆಗ್ಗಾನ್ ಆಸ್ಪತ್ರೆಗೆ ಬಳಕೆ ಮಾಡಲಾಗುತ್ತಿದೆ. ಇನ್ನು, ವಿಐಎಸ್ಎಲ್ನಲ್ಲಿ ಉತ್ಪಾದನೆ ಆಗುತ್ತಿರುವುದನ್ನು ಜಂಬೋ ಸಿಲಿಂಡರ್ಗಳಲ್ಲಿ ಫಿಲ್ಲಿಂಗ್ ಮಾಡಿ, ಜಿಲ್ಲೆಯ ವಿವಿಧ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದರು.
ಈಗ ಬಂದಿರುವ ಆಕ್ಸಿಜನ್ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಬೇಡಿಕೆ ಸಲ್ಲಿಸಿದರೆ ನಿಗದಿತ ಹಣ ಪಡೆದು ಅವುಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತದೆ.
ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ;
ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ. ಅಕ್ಸಿಜನ್ ಬಳಕೆ ಪ್ರಮಾಣವೂ ಇಳಿಕೆಯಾಗುತ್ತಿದೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹ ಮಾಡಿಟ್ಟುಕೊಳ್ಳುವುದು ಆಡಳಿತಕ್ಕೆ ಅನಿವಾರ್ಯವಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದ್ದಾರೆ.
Read: ಕುವೈಟ್ ಭಾರತೀಯ ನಿವಾಸಿಗಳಿಂದ ಭಾರೀ ಪ್ರಮಾಣದ ನೆರವು ; 252 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ
The truck carrying an oxygen cryogenic container from Mangaluru reaches Shivamogga. The medical oxygen was donated by the government of the Kingdom of Kuwait to India.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm