ಬ್ರೇಕಿಂಗ್ ನ್ಯೂಸ್
29-05-21 09:35 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 29: ಕೇಂದ್ರ ಗೃಹ ಸಚಿವಾಲಯದಿಂದ ಇತ್ತೀಚೆಗೆ ಬಿಡುಗಡೆ ಮಾಡಿರುವ ಗೈಡ್ ಲೈನ್ಸ್ ನಲ್ಲಿ ಎಲ್ಲ ರಾಜ್ಯಗಳು ಕೋವಿಡ್ ನಿಯಂತ್ರಣ ಮಾಡುವುದಕ್ಕಾಗಿ ಜೂನ್ 30ರ ವರೆಗೂ ನಿರ್ಬಂಧಗಳನ್ನು ಮುಂದುವರಿಸುವಂತೆ ಸೂಚನೆ ನೀಡಲಾಗಿದೆ. ಆದರೆ, ಕರ್ನಾಟಕದಲ್ಲಿ ಜೂನ್ 7ರ ಬಳಿಕವೂ ಲಾಕ್ಡೌನ್ ಮುಂದುವರಿಸಬೇಕೇ, ಬೇಡವೇ ಎನ್ನುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಈ ಬಗ್ಗೆ ಎಲ್ಲ ಸಚಿವರು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿ ಈ ಬಗ್ಗೆ ನಿರ್ಧಾರಕ್ಕೆ ಬರಲಿದ್ದಾರೆ. ಜೂನ್ 5ರ ವೇಳೆಗೆ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಹೇಳಿದರು.
ಕಳೆದ ಮೇ 10ರಿಂದ ರಾಜ್ಯದಲ್ಲಿ ನಿರ್ಬಂಧಿತ ಲಾಕ್ಡೌನ್ ಜಾರಿಯಲ್ಲಿದ್ದು, ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ವಸ್ತುಗಳ ಖರೀದಿಗಾಗಿ ಅವಕಾಶ ನೀಡಲಾಗಿದೆ. ಮೇ 24ರ ವರೆಗೆ ಜಾರಿಗೊಳಿಸಿದ್ದ ಲಾಕ್ಡೌನನ್ನು ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಪರಿಗಣಿಸಿ ಮತ್ತೆ ಎರಡು ವಾರಗಳಿಗೆ ಅಂದರೆ ಜೂನ್ 7ರ ವರೆಗೆ ವಿಸ್ತರಿಸಲಾಗಿತ್ತು.
ಕೇಂದ್ರ ಸರಕಾರ ಜೂನ್ ಕೊನೆ ವರೆಗೂ ನಿರ್ಬಂಧಗಳನ್ನು ಮುಂದುವರಿಸಲು ಸೂಚನೆ ನೀಡಿದೆ. ಆದರೆ, ಅಂತಿಮ ನಿರ್ಧಾರವನ್ನು ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಬಿಟ್ಟಿದೆ. ರಾಜ್ಯದಲ್ಲಿ ಮೂರು ವಾರಗಳ ಪರ್ಯಂತ ಲಾಕ್ಡೌನ್ ಪರಿಣಾಮ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಆದರೆ ಪಾಸಿಟಿವ್ ಆಗುತ್ತಿರುವ ಶೇಕಡಾವಾರು ಪ್ರಮಾಣ ಇಳಿಕೆಯಾಗಿಲ್ಲ. ಪಾಸಿಟಿವ್ ದರ ಗ್ರಾಮೀಣ ಪ್ರದೇಶಗಳಲ್ಲಿ ಹತ್ತು ಶೇಕಡಾಕ್ಕಿಂತ ಕಡಿಮೆಗೆ ಬರಲೇಬೇಕು. ಅದಕ್ಕಾಗಿ ನಾವು ಇದೇ ರೀತಿಯ ಲಾಕ್ಡೌನ್ ಮಾಡಲೇಬೇಕಾಗುತ್ತದೆ. ಬೇರಾವುದೇ ಉಪಾಯ ಇಲ್ಲ. ಆರೋಗ್ಯ ಕಾರ್ಯಕರ್ತರನ್ನು ಬಳಸ್ಕೊಂಡು ಸೋಂಕು ಹರಡುವುದನ್ನು ತಪ್ಪಿಸಬೇಕು. ಜೊತೆಗೆ ಸೋಂಕಿತರನ್ನು ಗುಣಮುಖರಾಗಿಸಬೇಕು ಎಂದು ಬೊಮ್ಮಾಯಿ ಹೇಳಿದರು.
Karnataka Chief Minister B S Yediyurappa on Saturday said the question of extending the lockdown may not arise if only the public cooperated and there is a decline in COVID-19 cases. These would be the factors that would determine the State government's decision on the lockdown which the State is currently in till June 7.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm