ಬ್ರೇಕಿಂಗ್ ನ್ಯೂಸ್
30-05-21 01:24 pm Satish, Bengaluru ಕರ್ನಾಟಕ
ಬೆಂಗಳೂರು, ಮೇ 29: ಕೋವಿಡ್ 19 ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೀದಿಗೆ ಇಳಿದವರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿದ ಪೊಲೀಸರು ಬರೋಬ್ಬರಿ 35905 ಸಾವಿರ ವಾಹನ ಜಪ್ತಿ ಮಾಡಿದ್ದಾರೆ. ಅದರಲ್ಲೂ 32 ಸಾವಿರ ದ್ವಿಚಕ್ರ ವಾಹನ. ಇವುಗಳಿಂದ ಸರಾಸರಿ ದಂಡ ಎಷ್ಟು ಸಂಗ್ರಹವಾಗುತ್ತದೆ. ಈ ದಂಡದ ಮೊತ್ತವನ್ನು ಏನು ಮಾಡುತ್ತಾರೆ ಎಂಬುದರ ಪೂರ್ಣ ವಿವರ ಇಲ್ಲಿದೆ ನೋಡಿ!

25 ಕೋಟಿ ಸಂಗ್ರಹವಾಗುವ ದಂಡದ ಮೊತ್ತ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸರ್ಕಾರ ಕೂಡ ಕಠಿಣ ಲಾಕ್ ಡೌನ್ ನಿಯಮ ಜಾರಿಗೊಳಿಸಿತು. ಸಾಮಾಜಿಕ ಅಂತರ ಕಾಪಾಡದ, ಮಾಸ್ಕ್ ಧರಿಸದವರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಲು ಪೊಲೀಸರಿಗೆ ಸೂಚಿಸಲಾಗಿತ್ತು. ಇನ್ನು ಬೇಕಾಬಿಟ್ಟಿ ರಸ್ತೆಗೆ ಇಳಿಯುವರ ವಾಹನ ಜಪ್ತಿ ಮಾಡಲು ಸೂಚಿಸಲಾಗಿತ್ತು. ಆರಂಭದಲ್ಲಿ ಪೊಲೀಸರು ಲಾಠಿ ಏಟಿನ ಮೂಲಕ ಬುದ್ಧಿ ಹೇಳಲು ಪ್ರಯತ್ನಿಸಿದ್ದರು. ಇದಕ್ಕೆ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ದಂಡಾಸ್ತ್ರ ಪ್ರಯೋಗ ಮಾಡಿದ್ದಾರೆ. ಬೆಂಗಳೂರು ಪೊಲೀಸರು ಕಳೆದ ಒಂದು ತಿಂಗಳಿನಲ್ಲಿ ದಾಖಲಿಸಿರುವ ಪ್ರಕರಣಗಳಿಂದ ಸಂಗ್ರಹವಾಗುವ ದಂಡದ ಮೊತ್ತ ಸರಾಸರಿ 25 ಕೋಟಿ ರೂಪಾಯಿಗೂ ಅಧಿಕವಾಗಲಿದೆ ಎಂದು ಅಂದಾಜಿಸಲಾಗಿದೆ.

35 ಸಾವಿರ ವಾಹನ ಜಪ್ತಿ
ರಾಜಧಾನಿಯಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆ ವರೆಗೂ ಅಗತ್ಯ ವಸ್ತುಗಳ ಖರೀದಿ ಹಾಗೂ ಜನರ ಓಡಾಟಕ್ಕೆ ಬೆಂಗಳೂರಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಅನಾವಶ್ಯಕ ಓಡಾಟಕ್ಕೆ ಅವಕಾಶ ನೀಡಿಲ್ಲ. ಆದರೆ ಬೆಂಗಳೂರಿನಲ್ಲಿ ಜನರು ಅನಾವಶ್ಯಕ ಓಡಾಟ ಮಾಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 32,203 ದ್ವಿಚಕ್ರ ವಾಹನಗಳನ್ನು ಬೆಂಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ. ಅದರಂತೆ 1678 ಆಟೋಗಳು, ನಾಲ್ಕು ಚಕ್ರದ 2024 ವಾಹನಗಳನ್ನು ಜಪ್ತಿ ಮಾಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಒಟ್ಟಾರೆ 35,905 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಎಲ್ಲಾ ವಾಹನಗಳಿಗೆ ನ್ಯಾಯಾಧೀಶರು ದಂಡ ವಿಧಿಸಲಿದ್ದು, ದಂಡದ ಮೊತ್ತವನ್ನು ಪಾವತಿಸಿ ವಾಹನ ಪಡೆಯಬೇಕು. ಪ್ರತಿ ವಾಹನಕ್ಕೆ ಸರಾಸರಿ 5 ಸಾವಿರ ದಂಡ ವಿಧಿಸಿದರೂ ಜಪ್ತಿಯಾದ ವಾಹನಗಳ ಬಿಡುಗಡೆಯಿಂದಲೇ ಬೆಂಗಳೂರು ಪೊಲೀಸರ ಖಜಾನೆಗೆ 17 ಕೋಟಿ ರೂ. ತುಂಬಲಿದೆ. ಗೃಹ ಸಚಿವರು ಹೇಳುವ ಪ್ರಕಾರ ಇನ್ನೂ ಒಂದು ತಿಂಗಳು ಲಾಕ್ ಡೌನ್ ವಿಸ್ತರಣೆ ಮಾಡುವ ಸುಳಿವು ನೀಡಿದ್ದಾರೆ. ಆಗೇನಾದರೂ ಆದರೆ, ಬರೋಬ್ಬರಿ ಪೊಲೀಸರು ಜಪ್ತಿ ಮಾಡುವ ವಾಹನ ಹಾಗೂ ವಿಧಿಸುವ ದಂಡದ ಮೊತ್ತ 50 ಕೋಟಿ ರೂ. ಆದರೂ ಅಚ್ಚರಿ ಪಡಬೇಕಿಲ್ಲ.
35,000 motor vehicles were seized for violation of lockdown norms in Bengaluru and the Bengaluru traffic police have collected a fine of 25 crores in which the Home Minister himself was shocked.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm