ಬ್ರೇಕಿಂಗ್ ನ್ಯೂಸ್
30-05-21 01:24 pm Satish, Bengaluru ಕರ್ನಾಟಕ
ಬೆಂಗಳೂರು, ಮೇ 29: ಕೋವಿಡ್ 19 ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೀದಿಗೆ ಇಳಿದವರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿದ ಪೊಲೀಸರು ಬರೋಬ್ಬರಿ 35905 ಸಾವಿರ ವಾಹನ ಜಪ್ತಿ ಮಾಡಿದ್ದಾರೆ. ಅದರಲ್ಲೂ 32 ಸಾವಿರ ದ್ವಿಚಕ್ರ ವಾಹನ. ಇವುಗಳಿಂದ ಸರಾಸರಿ ದಂಡ ಎಷ್ಟು ಸಂಗ್ರಹವಾಗುತ್ತದೆ. ಈ ದಂಡದ ಮೊತ್ತವನ್ನು ಏನು ಮಾಡುತ್ತಾರೆ ಎಂಬುದರ ಪೂರ್ಣ ವಿವರ ಇಲ್ಲಿದೆ ನೋಡಿ!

25 ಕೋಟಿ ಸಂಗ್ರಹವಾಗುವ ದಂಡದ ಮೊತ್ತ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸರ್ಕಾರ ಕೂಡ ಕಠಿಣ ಲಾಕ್ ಡೌನ್ ನಿಯಮ ಜಾರಿಗೊಳಿಸಿತು. ಸಾಮಾಜಿಕ ಅಂತರ ಕಾಪಾಡದ, ಮಾಸ್ಕ್ ಧರಿಸದವರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಲು ಪೊಲೀಸರಿಗೆ ಸೂಚಿಸಲಾಗಿತ್ತು. ಇನ್ನು ಬೇಕಾಬಿಟ್ಟಿ ರಸ್ತೆಗೆ ಇಳಿಯುವರ ವಾಹನ ಜಪ್ತಿ ಮಾಡಲು ಸೂಚಿಸಲಾಗಿತ್ತು. ಆರಂಭದಲ್ಲಿ ಪೊಲೀಸರು ಲಾಠಿ ಏಟಿನ ಮೂಲಕ ಬುದ್ಧಿ ಹೇಳಲು ಪ್ರಯತ್ನಿಸಿದ್ದರು. ಇದಕ್ಕೆ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ದಂಡಾಸ್ತ್ರ ಪ್ರಯೋಗ ಮಾಡಿದ್ದಾರೆ. ಬೆಂಗಳೂರು ಪೊಲೀಸರು ಕಳೆದ ಒಂದು ತಿಂಗಳಿನಲ್ಲಿ ದಾಖಲಿಸಿರುವ ಪ್ರಕರಣಗಳಿಂದ ಸಂಗ್ರಹವಾಗುವ ದಂಡದ ಮೊತ್ತ ಸರಾಸರಿ 25 ಕೋಟಿ ರೂಪಾಯಿಗೂ ಅಧಿಕವಾಗಲಿದೆ ಎಂದು ಅಂದಾಜಿಸಲಾಗಿದೆ.

35 ಸಾವಿರ ವಾಹನ ಜಪ್ತಿ
ರಾಜಧಾನಿಯಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆ ವರೆಗೂ ಅಗತ್ಯ ವಸ್ತುಗಳ ಖರೀದಿ ಹಾಗೂ ಜನರ ಓಡಾಟಕ್ಕೆ ಬೆಂಗಳೂರಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಅನಾವಶ್ಯಕ ಓಡಾಟಕ್ಕೆ ಅವಕಾಶ ನೀಡಿಲ್ಲ. ಆದರೆ ಬೆಂಗಳೂರಿನಲ್ಲಿ ಜನರು ಅನಾವಶ್ಯಕ ಓಡಾಟ ಮಾಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 32,203 ದ್ವಿಚಕ್ರ ವಾಹನಗಳನ್ನು ಬೆಂಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ. ಅದರಂತೆ 1678 ಆಟೋಗಳು, ನಾಲ್ಕು ಚಕ್ರದ 2024 ವಾಹನಗಳನ್ನು ಜಪ್ತಿ ಮಾಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಒಟ್ಟಾರೆ 35,905 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಎಲ್ಲಾ ವಾಹನಗಳಿಗೆ ನ್ಯಾಯಾಧೀಶರು ದಂಡ ವಿಧಿಸಲಿದ್ದು, ದಂಡದ ಮೊತ್ತವನ್ನು ಪಾವತಿಸಿ ವಾಹನ ಪಡೆಯಬೇಕು. ಪ್ರತಿ ವಾಹನಕ್ಕೆ ಸರಾಸರಿ 5 ಸಾವಿರ ದಂಡ ವಿಧಿಸಿದರೂ ಜಪ್ತಿಯಾದ ವಾಹನಗಳ ಬಿಡುಗಡೆಯಿಂದಲೇ ಬೆಂಗಳೂರು ಪೊಲೀಸರ ಖಜಾನೆಗೆ 17 ಕೋಟಿ ರೂ. ತುಂಬಲಿದೆ. ಗೃಹ ಸಚಿವರು ಹೇಳುವ ಪ್ರಕಾರ ಇನ್ನೂ ಒಂದು ತಿಂಗಳು ಲಾಕ್ ಡೌನ್ ವಿಸ್ತರಣೆ ಮಾಡುವ ಸುಳಿವು ನೀಡಿದ್ದಾರೆ. ಆಗೇನಾದರೂ ಆದರೆ, ಬರೋಬ್ಬರಿ ಪೊಲೀಸರು ಜಪ್ತಿ ಮಾಡುವ ವಾಹನ ಹಾಗೂ ವಿಧಿಸುವ ದಂಡದ ಮೊತ್ತ 50 ಕೋಟಿ ರೂ. ಆದರೂ ಅಚ್ಚರಿ ಪಡಬೇಕಿಲ್ಲ.
35,000 motor vehicles were seized for violation of lockdown norms in Bengaluru and the Bengaluru traffic police have collected a fine of 25 crores in which the Home Minister himself was shocked.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:19 pm
HK News Desk
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
03-12-25 10:35 pm
Mangalore Correspondent
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm