ಬ್ರೇಕಿಂಗ್ ನ್ಯೂಸ್
31-05-21 01:26 pm Headline Karnataka News Network ಕರ್ನಾಟಕ
ಮೈಸೂರು, ಮೇ 31: ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಸರ್ಕಾರ ಲಾಕ್ಡೌನ್ ವಿಧಿಸಿದೆ. ಈ ಲಾಕ್ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಜನರು ಹಲವು ಕಾರಣಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪರದಾಡುತ್ತಿದ್ದಾರೆ. ಬಸ್ಗಳಿಲ್ಲದೆ ಅಗತ್ಯವಿರುವ ವಸ್ತುಗಳನ್ನು ತರಲು ಹರಸಾಹಸ ಪಡಬೇಕಾಗಿದೆ.
ತನ್ನ ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ಅಪ್ಪ ಸೈಕಲ್ ತುಳಿದಿದ್ದಾರೆ. ಈ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.
ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆ ತಂದೆ ತನ್ನ ಸೈಕಲ್ ತುಳಿದು ಮಗನಿಗೆ ಮಾತ್ರೆ ತಂದುಕೊಟ್ಟಿದ್ದಾರೆ. ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ತಂದಿದ್ದಾರೆ. ಯಾರೂ ಬೈಕ್ ಕೊಡಲಿಲ್ಲ. ಒಂದು ದಿನ ಮಗನಿಗೆ ಮಾತ್ರೆ ತಪ್ಪಿಸಿದರೆ ತೊಂದರೆ ಆಗುತ್ತಿತ್ತು. ಮಗನಿಗೆ ಬೇಕಾದ ಮಾತ್ರೆ ಬೇರೆಲ್ಲೂ ಸಿಗುತ್ತಿರಲಿಲ್ಲ. ಹೀಗಾಗಿ ಸೈಕಲ್ನಲ್ಲಿಯೇ ಹೋಗಿ ಬಂದೆ ಎಂದು ಆನಂದ್ ಹೇಳಿದರು.
Dad goes cycling for 280 kilometers to bring medicine to his son in Mysuru
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 06:05 pm
Mangalore Correspondent
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm