ಬ್ರೇಕಿಂಗ್ ನ್ಯೂಸ್
31-05-21 01:26 pm Headline Karnataka News Network ಕರ್ನಾಟಕ
ಮೈಸೂರು, ಮೇ 31: ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಸರ್ಕಾರ ಲಾಕ್ಡೌನ್ ವಿಧಿಸಿದೆ. ಈ ಲಾಕ್ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಜನರು ಹಲವು ಕಾರಣಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪರದಾಡುತ್ತಿದ್ದಾರೆ. ಬಸ್ಗಳಿಲ್ಲದೆ ಅಗತ್ಯವಿರುವ ವಸ್ತುಗಳನ್ನು ತರಲು ಹರಸಾಹಸ ಪಡಬೇಕಾಗಿದೆ.
ತನ್ನ ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ಅಪ್ಪ ಸೈಕಲ್ ತುಳಿದಿದ್ದಾರೆ. ಈ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.
ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆ ತಂದೆ ತನ್ನ ಸೈಕಲ್ ತುಳಿದು ಮಗನಿಗೆ ಮಾತ್ರೆ ತಂದುಕೊಟ್ಟಿದ್ದಾರೆ. ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ತಂದಿದ್ದಾರೆ. ಯಾರೂ ಬೈಕ್ ಕೊಡಲಿಲ್ಲ. ಒಂದು ದಿನ ಮಗನಿಗೆ ಮಾತ್ರೆ ತಪ್ಪಿಸಿದರೆ ತೊಂದರೆ ಆಗುತ್ತಿತ್ತು. ಮಗನಿಗೆ ಬೇಕಾದ ಮಾತ್ರೆ ಬೇರೆಲ್ಲೂ ಸಿಗುತ್ತಿರಲಿಲ್ಲ. ಹೀಗಾಗಿ ಸೈಕಲ್ನಲ್ಲಿಯೇ ಹೋಗಿ ಬಂದೆ ಎಂದು ಆನಂದ್ ಹೇಳಿದರು.
Dad goes cycling for 280 kilometers to bring medicine to his son in Mysuru
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm