ಬ್ರೇಕಿಂಗ್ ನ್ಯೂಸ್
31-05-21 01:26 pm Headline Karnataka News Network ಕರ್ನಾಟಕ
ಮೈಸೂರು, ಮೇ 31: ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಸರ್ಕಾರ ಲಾಕ್ಡೌನ್ ವಿಧಿಸಿದೆ. ಈ ಲಾಕ್ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಜನರು ಹಲವು ಕಾರಣಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪರದಾಡುತ್ತಿದ್ದಾರೆ. ಬಸ್ಗಳಿಲ್ಲದೆ ಅಗತ್ಯವಿರುವ ವಸ್ತುಗಳನ್ನು ತರಲು ಹರಸಾಹಸ ಪಡಬೇಕಾಗಿದೆ.
ತನ್ನ ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ಅಪ್ಪ ಸೈಕಲ್ ತುಳಿದಿದ್ದಾರೆ. ಈ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.
ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆ ತಂದೆ ತನ್ನ ಸೈಕಲ್ ತುಳಿದು ಮಗನಿಗೆ ಮಾತ್ರೆ ತಂದುಕೊಟ್ಟಿದ್ದಾರೆ. ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ತಂದಿದ್ದಾರೆ. ಯಾರೂ ಬೈಕ್ ಕೊಡಲಿಲ್ಲ. ಒಂದು ದಿನ ಮಗನಿಗೆ ಮಾತ್ರೆ ತಪ್ಪಿಸಿದರೆ ತೊಂದರೆ ಆಗುತ್ತಿತ್ತು. ಮಗನಿಗೆ ಬೇಕಾದ ಮಾತ್ರೆ ಬೇರೆಲ್ಲೂ ಸಿಗುತ್ತಿರಲಿಲ್ಲ. ಹೀಗಾಗಿ ಸೈಕಲ್ನಲ್ಲಿಯೇ ಹೋಗಿ ಬಂದೆ ಎಂದು ಆನಂದ್ ಹೇಳಿದರು.
Dad goes cycling for 280 kilometers to bring medicine to his son in Mysuru
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 10:09 pm
HK News Staffer
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm