ಬ್ರೇಕಿಂಗ್ ನ್ಯೂಸ್
31-05-21 01:26 pm Headline Karnataka News Network ಕರ್ನಾಟಕ
ಮೈಸೂರು, ಮೇ 31: ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಸರ್ಕಾರ ಲಾಕ್ಡೌನ್ ವಿಧಿಸಿದೆ. ಈ ಲಾಕ್ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಜನರು ಹಲವು ಕಾರಣಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪರದಾಡುತ್ತಿದ್ದಾರೆ. ಬಸ್ಗಳಿಲ್ಲದೆ ಅಗತ್ಯವಿರುವ ವಸ್ತುಗಳನ್ನು ತರಲು ಹರಸಾಹಸ ಪಡಬೇಕಾಗಿದೆ.
ತನ್ನ ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ಅಪ್ಪ ಸೈಕಲ್ ತುಳಿದಿದ್ದಾರೆ. ಈ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.
ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆ ತಂದೆ ತನ್ನ ಸೈಕಲ್ ತುಳಿದು ಮಗನಿಗೆ ಮಾತ್ರೆ ತಂದುಕೊಟ್ಟಿದ್ದಾರೆ. ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ತಂದಿದ್ದಾರೆ. ಯಾರೂ ಬೈಕ್ ಕೊಡಲಿಲ್ಲ. ಒಂದು ದಿನ ಮಗನಿಗೆ ಮಾತ್ರೆ ತಪ್ಪಿಸಿದರೆ ತೊಂದರೆ ಆಗುತ್ತಿತ್ತು. ಮಗನಿಗೆ ಬೇಕಾದ ಮಾತ್ರೆ ಬೇರೆಲ್ಲೂ ಸಿಗುತ್ತಿರಲಿಲ್ಲ. ಹೀಗಾಗಿ ಸೈಕಲ್ನಲ್ಲಿಯೇ ಹೋಗಿ ಬಂದೆ ಎಂದು ಆನಂದ್ ಹೇಳಿದರು.
Dad goes cycling for 280 kilometers to bring medicine to his son in Mysuru
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm