ಬ್ರೇಕಿಂಗ್ ನ್ಯೂಸ್
31-05-21 01:26 pm Headline Karnataka News Network ಕರ್ನಾಟಕ
ಮೈಸೂರು, ಮೇ 31: ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಸರ್ಕಾರ ಲಾಕ್ಡೌನ್ ವಿಧಿಸಿದೆ. ಈ ಲಾಕ್ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಜನರು ಹಲವು ಕಾರಣಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪರದಾಡುತ್ತಿದ್ದಾರೆ. ಬಸ್ಗಳಿಲ್ಲದೆ ಅಗತ್ಯವಿರುವ ವಸ್ತುಗಳನ್ನು ತರಲು ಹರಸಾಹಸ ಪಡಬೇಕಾಗಿದೆ.
ತನ್ನ ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ಅಪ್ಪ ಸೈಕಲ್ ತುಳಿದಿದ್ದಾರೆ. ಈ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.
ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆ ತಂದೆ ತನ್ನ ಸೈಕಲ್ ತುಳಿದು ಮಗನಿಗೆ ಮಾತ್ರೆ ತಂದುಕೊಟ್ಟಿದ್ದಾರೆ. ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ತಂದಿದ್ದಾರೆ. ಯಾರೂ ಬೈಕ್ ಕೊಡಲಿಲ್ಲ. ಒಂದು ದಿನ ಮಗನಿಗೆ ಮಾತ್ರೆ ತಪ್ಪಿಸಿದರೆ ತೊಂದರೆ ಆಗುತ್ತಿತ್ತು. ಮಗನಿಗೆ ಬೇಕಾದ ಮಾತ್ರೆ ಬೇರೆಲ್ಲೂ ಸಿಗುತ್ತಿರಲಿಲ್ಲ. ಹೀಗಾಗಿ ಸೈಕಲ್ನಲ್ಲಿಯೇ ಹೋಗಿ ಬಂದೆ ಎಂದು ಆನಂದ್ ಹೇಳಿದರು.
Dad goes cycling for 280 kilometers to bring medicine to his son in Mysuru
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm