ಬ್ರೇಕಿಂಗ್ ನ್ಯೂಸ್
01-06-21 09:22 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 01; ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕರ್ನಾಟಕದಲ್ಲಿಯೂ ದ್ವಿತೀಯ ಪಿಯು ಪರೀಕ್ಷೆ ರದ್ದಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
ಮಂಗಳವಾರ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಕರ್ನಾಟಕದ ಶಿಕ್ಷಣ ಸಚಿವ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ಪರೀಕ್ಷೆಗಳ ಬಗ್ಗೆ ಮಾತನಾಡಿದ್ದು, "ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ" ಎಂದರು.
"ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು ಮಾಡಿದೆ. ರಾಜ್ಯ ಪಠ್ಯಕ್ರಮ ಅನುಸರಿಸಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನದ ಕುರಿತು ತೀರ್ಮಾನ ಮಾಡಲಾಗುತ್ತದೆ" ಎಂದು ತಿಳಿಸಿದರು.
"ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ" ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು. ಕರ್ನಾಟಕದಲ್ಲಿ ಮೇ 24ರಿಂದ ಜೂನ್ 10ರ ತನಕ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ದಿನಾಂಕ ಪ್ರಕಟಿಸಲಾಗಿತ್ತು. ಆದರೆ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
10ನೇ ತರಗತಿ ಪರೀಕ್ಷೆ?:
ದ್ವಿತೀಯ ಪಿಯುಸಿ ಪರೀಕ್ಷೆ ಮಾತ್ರವಲ್ಲ 10ನೇ ತರಗತಿ ಪರೀಕ್ಷೆ ಸಹ ಮುಂದೂಡಲಾಗಿದೆ. ಪರೀಕ್ಷೆ ನಡೆಸುವ ಕುರಿತು ಇನ್ನು ಶಿಕ್ಷಣ ಇಲಾಖೆ ಅಂತಿಮ ತೀರ್ಮಾನ ಕೈಗೊಂಡಿಲ್ಲ.
Karnataka Education Minister Suresh Kumar to Soon Determine if CBSE 2nd PUC Class 12 board exams in Karnataka will be cancelled or not. Class 12 board exams will not take place this year for CBSE and CISCE students, the decision came after a meeting between high-profile ministers of the Narendra Modi government. The meeting was chaired by PM and attended by the Union Minister of Information and Broadcasting Prakash Javadekar and Union Minister of Defence Rajnath Singh.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm