ಬ್ರೇಕಿಂಗ್ ನ್ಯೂಸ್
01-06-21 09:54 pm Satish, Bengaluru Correspondent ಕರ್ನಾಟಕ
ದಾವಣಗೆರೆ, ಜೂನ್ 1: ಯಡಿಯೂರಪ್ಪ ಆಲದ ಮರ, ಚಾಕು ಹಾಕಲು ಬಂದ್ರೆ ನಾವು ಸುಮ್ನೆ ಬೀಡ್ತೀವಾ? ಉಂಡು ಹೋದ ಕೊಂಡೂ ಹೋದ ಯೋಗಿಶ್ವರ್ ಒಬ್ಬ ಭ್ರಷ್ಟಾಚಾರಿ.. ಹೀಗೆಂದು ಸಚಿವ ಸಿ.ಪಿ. ಯೋಗೀಶ್ವರ್ ಅವರನ್ನು ಛೇಡಿಸಿದ್ದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ.
ಇತ್ತೀಚೆಗೆ ಸಿಎಂ ಯಡಿಯೂರಪ್ಪ ವಿರುದ್ಧ ದೆಹಲಿಗೆ ದೂರು ಹೇಳಿಕೊಂಡು ಹೋಗಿದ್ದಲ್ಲದೆ, ರಾಜ್ಯದಲ್ಲಿರುವುದು ಮೂರು ಪಕ್ಷಗಳ ಸರಕಾರ ಎಂದು ಟೀಕಿಸಿದ್ದ ಯೋಗೀಶ್ವರ್ ವಿರುದ್ಧ ಬಿಜೆಪಿಯ ಇತರ ಸಚಿವರು, ಯಡಿಯೂರಪ್ಪ ಬಣದ ಶಾಸಕರು ಹರಿಹಾಯ್ದಿದ್ದಾರೆ.

ಇದೇ ವಿಚಾರದಲ್ಲಿ ದಾವಣಗೆರೆಯಲ್ಲಿ ಯೋಗೀಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ ಎಂಪಿ ರೇಣುಕಾಚಾರ್ಯ, ಯೋಗೀಶ್ವರ್ ಒಬ್ಬ ಭ್ರಷ್ಟಾಚಾರಿ.. ಆ ವ್ಯಕ್ತಿ ಏನೆಲ್ಲ ಮಾಡಿದ್ದಾನೆ ಅವೆಲ್ಲದರ ದಾಖಲೆ ಬಿಡುಗಡೆ ಮಾಡುತ್ತೇನೆ. ಮೆಗಾಸಿಟಿ ಅಕ್ರಮದ ಬಗ್ಗೆಯೂ ದಾಖಲೆ ಬಿಡುಗಡೆ ಮಾಡ್ತೀನಿ ಎಂದು ಗುಡುಗಿದ್ದಾರೆ.
ಚುನಾವಣೆಯಲ್ಲಿ ಸೋತ ವ್ಯಕ್ತಿ ಅವರಿವರ ಕಾಲು ಹಿಡಿದು ಮಂತ್ರಿ ಆಗಿದ್ದಾನೆ. ಕೊಟ್ಟ ಇಲಾಖೆಯ ಅಧಿಕಾರಿಗಳ ಸಭೆಯನ್ನೇ ಮಾಡಿಲ್ಲ. ಕೇವಲ ದೆಹಲಿ- ಬೆಂಗಳೂರು ಪ್ರವಾಸ ಮಾಡುವುದೇ ಆಗಿದೆ. ಕೆಲವು
ದೆಹಲಿ ನಾಯಕರ ಗೇಟ್ ಕಾದು ಗಾಸಿಪ್ ಹರಡಿಸುವುದೇ ಯೋಗಿಶ್ವರ್ ಕೆಲಸವಾಗಿದೆ. ಇದೀಗ ರಾಷ್ಟ್ರೀಯ ನಾಯಕರೇ ಮಂಗಳಾರತಿ ಮಾಡಿ ಕಳುಹಿಸಿದ್ದಾರೆ ಎಂದು ಮೂದಲಿಸಿದರು.

ಯೋಗೀಶ್ವರ್ ತನ್ನ ಸ್ವಂತ ಊರು ಚಿಕ್ಕೇರಿಹಳ್ಳಿಯಲ್ಲಿ ಬಿಜೆಪಿಗೆ ಗ್ರಾಪಂ ಸ್ಥಾನವನ್ನೂ ಗೆಲ್ಲಿಸಲು ಸಾಧ್ಯವಾಗಿಲ್ಲ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಗರಸಭೆಯನ್ನೂ ಗೆದ್ದಿಲ್ಲ. ಇವರಿಗೆ ರಾಮನಗರ ಉಸ್ತುವಾರಿ ಬೇಕಂತೆ ಎಂದು ವ್ಯಂಗ್ಯವಾಡಿದ ರೇಣುಕಾಚಾರ್ಯ,
ಚುನಾವಣೆಯಲ್ಲಿ ಸೋತ ವ್ಯಕ್ತಿಗೆ ಹಿಂಬಾಗಿಲ ಮೂಲಕ ಮಂತ್ರಿ ಸ್ಥಾನ ಕೊಟ್ಟಿದ್ದೇ ಅಪರಾಧ, ಈತನಿಗೆ ಉಸ್ತುವಾರಿ ಬೇಕಂತೆ. ಮೂರು ಪಕ್ಷ ಹಾರಿ ಬಂದ ಯೋಗಿಶ್ವರ್ ಪಾಲಿಗೆ ಬಿಜೆಪಿಯಲ್ಲಿ ಕಥೆ ಮುಗಿದಂತೆ. ಈಗಾಗ್ಲೇ 65 ಜನ ಶಾಸಕರು ಸಹಿ ಮಾಡಿದ್ದೇವೆ, ಕೋವಿಡ್ ಮುಗಿದ ಬಳಿಕ ಸಚಿವ ಸ್ಥಾನದಿಂದ ವಜಾಕ್ಕೆ ಹೈಕಮಾಂಡ್ ಗೆ ಅಗ್ರಹ ಮಾಡುತ್ತೇವೆ ಎಂದು ಹೇಳಿದರು.
ಯತ್ನಾಳ್ ಸಿಎಂ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ. ಪದೇ ಪದೇ ವಿಜಯೇಂದ್ರ ಹೆಸರು ಯಾಕೆ ಹೇಳ್ತೀರಿ.. ಇವೆಲ್ಲದರ ಬಗ್ಗೆ ಇನ್ನು ಸುಮ್ಮನಿರಲು ಸಾಧ್ಯವಿಲ್ಲ ಎಂದು ರೇಣುಕಾಚಾರ್ಯ ಕಿಡಿಕಾರಿದ್ದಾರೆ.
Davangere MP Renukacharya slammed at CP Yogeshwar says he's a most corrupted Politician. CM Yediyurappa is like an Ashoka tree no one can cut off him said Renukacharya
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm