ಬ್ರೇಕಿಂಗ್ ನ್ಯೂಸ್
03-06-21 10:28 pm Satish, Bengaluru ಕರ್ನಾಟಕ
ಬೆಂಗಳೂರು, ಜೂನ್ 3: ಏಳು ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಕೆಎಸ್ಆರ್ಟಿಸಿ ಬ್ರ್ಯಾಂಡ್ ಹೆಸರು ಕೇರಳದ ಪಾಲಾಗಿದೆ. ಕೆಎಸ್ಆರ್ಟಿಸಿ ಹೆಸರನ್ನು ಕರ್ನಾಟಕ ಸರಕಾರ ತನ್ನ ಸಾರಿಗೆ ಪ್ರಾಧಿಕಾರಕ್ಕೆ ಬಳಕೆ ಮಾಡುವಂತಿಲ್ಲ ಎಂದು ಟ್ರೇಡ್ ಮಾರ್ಕ್ ಪ್ರಾಧಿಕಾರ ಆದೇಶ ಮಾಡಿದೆ.
ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ತೀರ್ಪು ನೀಡಿದ್ದು, Karnataka State Road Transport Corporation (KSRTC) ಎನ್ನುವ ವಿಸ್ತೃತ ರೂಪವನ್ನು ಕರ್ನಾಟಕ ಸರಕಾರ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಿದೆ. ಈ ಬೆಳವಣಿಗೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಟ್ವಿಟ್ಟರ್ನಲ್ಲಿ ಕರ್ನಾಟಕ ಸಾರಿಗೆ ಸಮರ್ಥಿಸಿಕೊಂಡು ನೆಟ್ಟಿಗರು ಸರಣಿ ಟ್ವೀಟ್ಗಳನ್ನು ಮಾಡುತ್ತಿದ್ದಾರೆ.

KSRTC ಎನ್ನುವ ಹೆಸರನ್ನು ಕೇರಳದವರು ಗೆದ್ದುಕೊಳ್ಳಬಹುದು. ಆದರೆ ಕ.ರಾ.ರ.ಸಾ.ನಿ ಸೇವೆ ಮತ್ತು ಗುಣಮಟ್ಟವನ್ನು ಹಿಂದಿಕ್ಕುವುದು ದಕ್ಷಿಣ ಭಾರತದ ಯಾವ ರಾಜ್ಯದ ಸಾರಿಗೆ ನಿಗಮಕ್ಕೂ ಆಗಲಿಕ್ಕಿಲ್ಲ. ದಕ್ಷಿಣದ ನಾಲ್ಕು ರಾಜ್ಯಗಳ ಸಾರಿಗೆ ಬಳಸಿದ ಅನುಭವದ ಮೇಲೆ ಇದು ನನ್ನ ಅನಿಸಿಕೆ ಎಂದು ವಸಂತ್ ಶೆಟ್ಟಿ ಎಂಬವರು ಟ್ವೀಟ್ ಮಾಡಿದ್ದಾರೆ.
ಗಂಡಭೇರುಂಡ ಲೋಗೊ ಜೊತೆಗೆ ಕೇರಳ ಸರಕಾರ ಕೆಎಸ್ಸಾರ್ಟಿಸಿ ಹೆಸರನ್ನು ತನ್ನ ಸಾರಿಗೆ ಬಸ್ ಗಳಲ್ಲಿ ನಮೂದಿಸಿತ್ತು. ಆದರೆ, ಕರ್ನಾಟಕ ಸರಕಾರವೂ ಸಾರಿಗೆ ಪ್ರಾಧಿಕಾರಕ್ಕೆ ಅದೇ ಹೆಸರಿಟ್ಟು ಲೋಗೊ ಬದಲು ಮಾಡಿತ್ತು. ಈ ವಿಚಾರ ಜಟಾಪಟಿಗೆ ಕಾರಣವಾಗಿತ್ತಲ್ಲದೆ, ಕೇರಳ ಸರಕಾರ ಹೆಸರನ್ನು ತನ್ನದಾಗಿಸಿಕೊಳ್ಳಲು ಟ್ರೇಡ್ ಮಾರ್ಕ್ ಪ್ರಾಧಿಕಾರಕ್ಕೆ ದೂರು ನೀಡಿತ್ತು. ಕೆಎಸ್ಆರ್ಟಿಸಿ ಎಂಬ ಹೆಸರನ್ನು ಕೇರಳ 1962ರಲ್ಲೇ ನೋಂದಣಿ ಮಾಡಿಸಿದೆ. ಕರ್ನಾಟಕ 1972ರಲ್ಲಿ ನೋಂದಣಿ ಮಾಡಿಸಿದ್ದು ಎಂಬ ಅಂಶವನ್ನು ತೀರ್ಪು ನೀಡುವಾಗ ಪರಿಗಣಿಸಿದೆ.

ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕರ್ನಾಟಕದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಈ ಬಗ್ಗೆ ಅಧಿಕೃತ ಘೋಷಣೆ ಬಂದಿಲ್ಲ. ಆದೇಶ ಬಂದ ಮೇಲೆ ಕಾನೂನು ಹೋರಾಟದ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
After a seven-year-long dispute with neighboring state Karnataka, the Kerala State Road Transport Corporation says it has got the legal rights to the trademarked-acronym KSRTC- with the logo of two elephants and the name Ana Vandi- associated with the state-run transport corporation.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm