ಬ್ರೇಕಿಂಗ್ ನ್ಯೂಸ್
04-06-21 12:14 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 4: ಉಡುಪಿ ಜಿಲ್ಲೆಯ ಮಣಿಪಾಲ ಮೂಲದ ಮಣಿಪಾಲ್ ಗ್ರೂಪ್ ಸಮೂಹ ತನ್ನ ಉದ್ಯಮ ಜಾಲವನ್ನು ವಿಸ್ತರಿಸುತ್ತಲೇ ಇದ್ದು ಕೊರೊನಾ ಬಿಕ್ಕಟ್ಟಿನ ನಡುವೆಯೇ ಬೆಂಗಳೂರು ಮೂಲದ ವಿಕ್ರಮ್ ಆಸ್ಪತ್ರೆಯನ್ನು ಬರೋಬ್ಬರಿ 350 ಕೋಟಿ ರೂಪಾಯಿಗೆ ಖರೀದಿಸಿದೆ.
ಉದ್ಯಮಿ ರಂಜನ್ ಪೈ ಮಾಲೀಕತ್ವದ ಮಣಿಪಾಲ್ ಗ್ರೂಪ್ ಕಳೆದ ಏಪ್ರಿಲ್ನಲ್ಲಿ ಕೊಲಂಬಿಯಾ ಏಷ್ಯಾದ ಭಾರತೀಯ ವಿಭಾಗವನ್ನು 2,100 ಕೋಟಿ ರೂ.ಗೆ ಖರೀದಿಸಿ ಹುಬ್ಬೇರಿಸಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಆಸ್ಪತ್ರೆಯನ್ನು ಖರೀದಿಸಿದ್ದು ಒಂದೇ ವರ್ಷದಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ಎರಡನೇ ಡೀಲ್ ನಡೆದಿದೆ. ಇದರೊಂದಿಗೆ ಅಪೊಲೊ ನಂತರ ದೇಶದ ಎರಡನೇ ಅತಿ ದೊಡ್ಡ ಆಸ್ಪತ್ರೆ ಸಮೂಹವಾಗಿ ಮಣಿಪಾಲ್ ಗ್ರೂಪ್ ಸಮೂಹ ಹೊರಹೊಮ್ಮಿದೆ.
ಈ ಡೀಲ್ ಬಳಿಕ ವಿಕ್ರಮ್ ಆಸ್ಪತ್ರೆಯ ಹೆಸರು ಮಣಿಪಾಲ್ ಹಾಸ್ಪಿಟಲ್ ಎಂದು ಬದಲಾಗಲಿದೆ. ಇದರೊಂದಿಗೆ ರಾಜಧಾನಿ ಬೆಂಗಳೂರು ಒಂದರಲ್ಲೇ ಮಣಿಪಾಲ್ ಗ್ರೂಪ್ನ ಆಸ್ಪತ್ರೆಗಳ ಸಂಖ್ಯೆ 10ಕ್ಕೆ ಏರಿಕೆಯಾಗಲಿದೆ. (4 ಮಣಿಪಾಲ್ ಹಾಸ್ಪಿಟಲ್ಸ್, 5 ಕೊಲಂಬಿಯಾ ಏಷ್ಯಾ ಹಾಸ್ಪಿಟಲ್, ಒಂದು ವಿಕ್ರಮ್ ಆಸ್ಪತ್ರೆ).

ಇದೇ ವೇಳೆ, ಮಣಿಪಾಲ್ ಗ್ರೂಪ್ ಎರಡು ಕಡೆ ಗ್ರೀನ್ಫೀಲ್ಡ್ ಆಸ್ಪತ್ರೆಗಳನ್ನು ನಿರ್ಮಿಸುತ್ತಿದ್ದು, ಮುಂದಿನ 24 ತಿಂಗಳುಗಳಲ್ಲಿ ಮುಕ್ತಾಯವಾಗುವ ನಿರೀಕ್ಷೆಯಿದೆ. ಇದರಿಂದ ನಮ್ಮ ನೆಟ್ವರ್ಕ್ 12 ಆಸ್ಪತ್ರೆಗಳಿಗೆ ವಿಸ್ತರಣೆಯಾಗಲಿದ್ದು, 2,300 ಬೆಡ್ ಲಭ್ಯವಾಗಲಿದೆ ಎಂದು ಎಂದು ಮಣಿಪಾಲ್ ಎಜ್ಯುಕೇಶನ್ ಆ್ಯಂಡ್ ಮೆಡಿಕಲ್ ಗ್ರೂಪ್ನ ಅಧ್ಯಕ್ಷ ರಂಜನ್ ಪೈ ತಿಳಿಸಿದ್ದಾರೆ.
ವಿಕ್ರಮ್ ಮತ್ತು ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ ಖರೀದಿಯ ನಂತರ ದೇಶದಲ್ಲಿ ಮಣಿಪಾಲ್ ಗ್ರೂಪ್ನ ಆಸ್ಪತ್ರೆಗಳ ಸಂಖ್ಯೆ 27ಕ್ಕೆ ಏರಿಕೆಯಾಗಲಿದೆ. 14 ನಗರಗಳಲ್ಲಿ ಮಣಿಪಾಲ್ ಆಸ್ಪತ್ರೆಗಳಿದ್ದು, 7,300 ಬೆಡ್ಗಳನ್ನು ಹೊಂದಿವೆ. 4,000 ವೈದ್ಯರು ಹಾಗೂ 11,000 ಸಿಬ್ಬಂದಿಗಳು ಆಸ್ಪತ್ರೆಗಳ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶದ ಅತೀ ದೊಡ್ಡ ಆಸ್ಪತ್ರೆ ಸಮೂಹ ಅಪೋಲೊ ಬಳಿಯಲ್ಲಿ 70 ಆಸ್ಪತ್ರೆಗಳಿವೆ.
Manipal Hospitals, the second-largest hospital chain in India, entered into a definitive agreement with private equity firm Multiples to acquire a 100% stake in Bengaluru-based multi-specialty hospital Vikram Hospital for consideration of ₹350 crores.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm