ಬ್ರೇಕಿಂಗ್ ನ್ಯೂಸ್
29-08-20 05:31 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಚಂದನವನದ ಕೆಲವು ನಟ-ನಟಿಯರಿಗೆ ಡ್ರಗ್ಸ್ ನ ವ್ಯಸನ ಇದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ಇಂದ್ರಜಿತ್, ಚಂದನವನದಲ್ಲಿ ಡ್ರಗ್ ಮಾಫಿಯಾ ಇರುವುದು ನಿಜ ನಾನೇ ಕಣ್ಣಾರೆ ನೋಡಿದ್ದೇನೆ' ಎಂದಿದ್ದಾರೆ.
ಹಲವು ಯುವ ನಟ-ನಟಿಯರು ಡ್ರಗ್ಸ್ನ ಹಿಂದೆ ಬಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ರೇವ್ ಪಾರ್ಟಿ, ನೈಟ್ ಪಾರ್ಟಿಗಳು ನಡೆಯುವ ಸಂದರ್ಭಗಳಲ್ಲಿ ಡ್ರಗ್ಸ್ ಹರಿದಾಡುತ್ತದೆ ಹಾಗೂ ಹಲವು ಯುವ ನಟರು ಈ ಡ್ರಗ್ಸ್ನ ಚಟಕ್ಕೆ ಬಿದ್ದಿದ್ದಾರೆ ಎಂದು ನೇರವಾಗಿ ಹೇಳಿದ್ದಾರೆ.
ದೊಡ್ಡ ಸ್ಟಾರ್ ನಟರುಗಳು ಇಂಥಹುದರಲ್ಲಿ ಇಲ್ಲ. ಆದರೆ ಒಂದೆರಡು ಸಿನಿಮಾ ಮಾಡಿದ ಯುವ ನಟರು ಕೆಲವರು ಡ್ರಗ್ಸ್ಗೆ ದಾಸರಾಗಿದ್ದಾರೆ. ದುಡ್ಡಿನ ವ್ಯಾಮೋಹ, ಹಣದ ಆಸೆಗೆ ಬಿದ್ದು ಕೆಲವರು ಮಾಫಿಯಾದ ಒಳಕ್ಕೆ ಸೇರಿದ್ದಾರೆ. ಕೊಕೇನ್ ರೀತಿಯ ಅಪಾಯಕಾರಿ ಮಾದಕ ವಸ್ತು ಸಹ ಚಂದನವನ ನಟ-ನಟಿಯರ ಕೈಗೆ ಎಟುಕುತ್ತಿದೆ ಎಂದು ಶಾಕಿಂಗ್ ಅಂಶ ಬಹಿರಂಗಪಡಿಸಿದ್ದಾರೆ ಇಂದ್ರಜಿತ್.

ಇಷ್ಟೇ ಅಲ್ಲದೆ ಯಾರೆಲ್ಲಾ ಈ ಮಾಫಿಯಾದಲ್ಲಿದ್ದಾರೆ, ಯಾರೆಲ್ಲಾ ದಾಸರಾಗಿದ್ದಾರೆ ಎಂಬುದನ್ನು ನಾನು ಬೇಕಾದರೆ ಬಹಿರಂಗಪಡಿಸುತ್ತೇನೆ. ಆದರೆ ಪೊಲೀಸರು ನನಗೆ ಸೂಕ್ತ ರಕ್ಷಣೆ ಕೊಡುಬೇಕು ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
ಇತ್ತೀಚಿಗೆ ನಿಧನರಾದ 35 ವರ್ಷ ವಯಸ್ಸಿನ ನಟನ ಸಾವಿನ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್, ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಾರೆ ಎಂದರೆ ಏನು ಕಾರಣ?, ಆ ನಟನ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಯಾಕೆ ಮಾಡಿಸಿಲ್ಲ? ಪರೀಕ್ಷೆ ಮಾಡಿಸಿದ್ದರೆ ಎಲ್ಲಾ ಬಯಲಾಗುತ್ತಿತ್ತು. ಮರಣೋತ್ತರ ಪರೀಕ್ಷೆ ನಡೆಸದಂತೆ ಪೊಲೀಸರಿಗೆ ರಾಜಕೀಯ ಒತ್ತಡವಿತ್ತು. ಯಾವ ರಾಜಕೀಯ ವ್ಯಕ್ತಿ ಒತ್ತಡ ಹಾಕಿದ್ದಾರೆ ಎನ್ನುವುದು ಗೊತ್ತಿದೆ" ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm