ಬ್ರೇಕಿಂಗ್ ನ್ಯೂಸ್
29-08-20 05:31 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಚಂದನವನದ ಕೆಲವು ನಟ-ನಟಿಯರಿಗೆ ಡ್ರಗ್ಸ್ ನ ವ್ಯಸನ ಇದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ಇಂದ್ರಜಿತ್, ಚಂದನವನದಲ್ಲಿ ಡ್ರಗ್ ಮಾಫಿಯಾ ಇರುವುದು ನಿಜ ನಾನೇ ಕಣ್ಣಾರೆ ನೋಡಿದ್ದೇನೆ' ಎಂದಿದ್ದಾರೆ.
ಹಲವು ಯುವ ನಟ-ನಟಿಯರು ಡ್ರಗ್ಸ್ನ ಹಿಂದೆ ಬಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ರೇವ್ ಪಾರ್ಟಿ, ನೈಟ್ ಪಾರ್ಟಿಗಳು ನಡೆಯುವ ಸಂದರ್ಭಗಳಲ್ಲಿ ಡ್ರಗ್ಸ್ ಹರಿದಾಡುತ್ತದೆ ಹಾಗೂ ಹಲವು ಯುವ ನಟರು ಈ ಡ್ರಗ್ಸ್ನ ಚಟಕ್ಕೆ ಬಿದ್ದಿದ್ದಾರೆ ಎಂದು ನೇರವಾಗಿ ಹೇಳಿದ್ದಾರೆ.
ದೊಡ್ಡ ಸ್ಟಾರ್ ನಟರುಗಳು ಇಂಥಹುದರಲ್ಲಿ ಇಲ್ಲ. ಆದರೆ ಒಂದೆರಡು ಸಿನಿಮಾ ಮಾಡಿದ ಯುವ ನಟರು ಕೆಲವರು ಡ್ರಗ್ಸ್ಗೆ ದಾಸರಾಗಿದ್ದಾರೆ. ದುಡ್ಡಿನ ವ್ಯಾಮೋಹ, ಹಣದ ಆಸೆಗೆ ಬಿದ್ದು ಕೆಲವರು ಮಾಫಿಯಾದ ಒಳಕ್ಕೆ ಸೇರಿದ್ದಾರೆ. ಕೊಕೇನ್ ರೀತಿಯ ಅಪಾಯಕಾರಿ ಮಾದಕ ವಸ್ತು ಸಹ ಚಂದನವನ ನಟ-ನಟಿಯರ ಕೈಗೆ ಎಟುಕುತ್ತಿದೆ ಎಂದು ಶಾಕಿಂಗ್ ಅಂಶ ಬಹಿರಂಗಪಡಿಸಿದ್ದಾರೆ ಇಂದ್ರಜಿತ್.
ಇಷ್ಟೇ ಅಲ್ಲದೆ ಯಾರೆಲ್ಲಾ ಈ ಮಾಫಿಯಾದಲ್ಲಿದ್ದಾರೆ, ಯಾರೆಲ್ಲಾ ದಾಸರಾಗಿದ್ದಾರೆ ಎಂಬುದನ್ನು ನಾನು ಬೇಕಾದರೆ ಬಹಿರಂಗಪಡಿಸುತ್ತೇನೆ. ಆದರೆ ಪೊಲೀಸರು ನನಗೆ ಸೂಕ್ತ ರಕ್ಷಣೆ ಕೊಡುಬೇಕು ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
ಇತ್ತೀಚಿಗೆ ನಿಧನರಾದ 35 ವರ್ಷ ವಯಸ್ಸಿನ ನಟನ ಸಾವಿನ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್, ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಾರೆ ಎಂದರೆ ಏನು ಕಾರಣ?, ಆ ನಟನ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಯಾಕೆ ಮಾಡಿಸಿಲ್ಲ? ಪರೀಕ್ಷೆ ಮಾಡಿಸಿದ್ದರೆ ಎಲ್ಲಾ ಬಯಲಾಗುತ್ತಿತ್ತು. ಮರಣೋತ್ತರ ಪರೀಕ್ಷೆ ನಡೆಸದಂತೆ ಪೊಲೀಸರಿಗೆ ರಾಜಕೀಯ ಒತ್ತಡವಿತ್ತು. ಯಾವ ರಾಜಕೀಯ ವ್ಯಕ್ತಿ ಒತ್ತಡ ಹಾಕಿದ್ದಾರೆ ಎನ್ನುವುದು ಗೊತ್ತಿದೆ" ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm