ಬ್ರೇಕಿಂಗ್ ನ್ಯೂಸ್
29-08-20 05:31 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಚಂದನವನದ ಕೆಲವು ನಟ-ನಟಿಯರಿಗೆ ಡ್ರಗ್ಸ್ ನ ವ್ಯಸನ ಇದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ಇಂದ್ರಜಿತ್, ಚಂದನವನದಲ್ಲಿ ಡ್ರಗ್ ಮಾಫಿಯಾ ಇರುವುದು ನಿಜ ನಾನೇ ಕಣ್ಣಾರೆ ನೋಡಿದ್ದೇನೆ' ಎಂದಿದ್ದಾರೆ.
ಹಲವು ಯುವ ನಟ-ನಟಿಯರು ಡ್ರಗ್ಸ್ನ ಹಿಂದೆ ಬಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ರೇವ್ ಪಾರ್ಟಿ, ನೈಟ್ ಪಾರ್ಟಿಗಳು ನಡೆಯುವ ಸಂದರ್ಭಗಳಲ್ಲಿ ಡ್ರಗ್ಸ್ ಹರಿದಾಡುತ್ತದೆ ಹಾಗೂ ಹಲವು ಯುವ ನಟರು ಈ ಡ್ರಗ್ಸ್ನ ಚಟಕ್ಕೆ ಬಿದ್ದಿದ್ದಾರೆ ಎಂದು ನೇರವಾಗಿ ಹೇಳಿದ್ದಾರೆ.
ದೊಡ್ಡ ಸ್ಟಾರ್ ನಟರುಗಳು ಇಂಥಹುದರಲ್ಲಿ ಇಲ್ಲ. ಆದರೆ ಒಂದೆರಡು ಸಿನಿಮಾ ಮಾಡಿದ ಯುವ ನಟರು ಕೆಲವರು ಡ್ರಗ್ಸ್ಗೆ ದಾಸರಾಗಿದ್ದಾರೆ. ದುಡ್ಡಿನ ವ್ಯಾಮೋಹ, ಹಣದ ಆಸೆಗೆ ಬಿದ್ದು ಕೆಲವರು ಮಾಫಿಯಾದ ಒಳಕ್ಕೆ ಸೇರಿದ್ದಾರೆ. ಕೊಕೇನ್ ರೀತಿಯ ಅಪಾಯಕಾರಿ ಮಾದಕ ವಸ್ತು ಸಹ ಚಂದನವನ ನಟ-ನಟಿಯರ ಕೈಗೆ ಎಟುಕುತ್ತಿದೆ ಎಂದು ಶಾಕಿಂಗ್ ಅಂಶ ಬಹಿರಂಗಪಡಿಸಿದ್ದಾರೆ ಇಂದ್ರಜಿತ್.
ಇಷ್ಟೇ ಅಲ್ಲದೆ ಯಾರೆಲ್ಲಾ ಈ ಮಾಫಿಯಾದಲ್ಲಿದ್ದಾರೆ, ಯಾರೆಲ್ಲಾ ದಾಸರಾಗಿದ್ದಾರೆ ಎಂಬುದನ್ನು ನಾನು ಬೇಕಾದರೆ ಬಹಿರಂಗಪಡಿಸುತ್ತೇನೆ. ಆದರೆ ಪೊಲೀಸರು ನನಗೆ ಸೂಕ್ತ ರಕ್ಷಣೆ ಕೊಡುಬೇಕು ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
ಇತ್ತೀಚಿಗೆ ನಿಧನರಾದ 35 ವರ್ಷ ವಯಸ್ಸಿನ ನಟನ ಸಾವಿನ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್, ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಾರೆ ಎಂದರೆ ಏನು ಕಾರಣ?, ಆ ನಟನ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಯಾಕೆ ಮಾಡಿಸಿಲ್ಲ? ಪರೀಕ್ಷೆ ಮಾಡಿಸಿದ್ದರೆ ಎಲ್ಲಾ ಬಯಲಾಗುತ್ತಿತ್ತು. ಮರಣೋತ್ತರ ಪರೀಕ್ಷೆ ನಡೆಸದಂತೆ ಪೊಲೀಸರಿಗೆ ರಾಜಕೀಯ ಒತ್ತಡವಿತ್ತು. ಯಾವ ರಾಜಕೀಯ ವ್ಯಕ್ತಿ ಒತ್ತಡ ಹಾಕಿದ್ದಾರೆ ಎನ್ನುವುದು ಗೊತ್ತಿದೆ" ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm