ಬ್ರೇಕಿಂಗ್ ನ್ಯೂಸ್
29-08-20 05:31 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಚಂದನವನದ ಕೆಲವು ನಟ-ನಟಿಯರಿಗೆ ಡ್ರಗ್ಸ್ ನ ವ್ಯಸನ ಇದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ಇಂದ್ರಜಿತ್, ಚಂದನವನದಲ್ಲಿ ಡ್ರಗ್ ಮಾಫಿಯಾ ಇರುವುದು ನಿಜ ನಾನೇ ಕಣ್ಣಾರೆ ನೋಡಿದ್ದೇನೆ' ಎಂದಿದ್ದಾರೆ.
ಹಲವು ಯುವ ನಟ-ನಟಿಯರು ಡ್ರಗ್ಸ್ನ ಹಿಂದೆ ಬಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ರೇವ್ ಪಾರ್ಟಿ, ನೈಟ್ ಪಾರ್ಟಿಗಳು ನಡೆಯುವ ಸಂದರ್ಭಗಳಲ್ಲಿ ಡ್ರಗ್ಸ್ ಹರಿದಾಡುತ್ತದೆ ಹಾಗೂ ಹಲವು ಯುವ ನಟರು ಈ ಡ್ರಗ್ಸ್ನ ಚಟಕ್ಕೆ ಬಿದ್ದಿದ್ದಾರೆ ಎಂದು ನೇರವಾಗಿ ಹೇಳಿದ್ದಾರೆ.
ದೊಡ್ಡ ಸ್ಟಾರ್ ನಟರುಗಳು ಇಂಥಹುದರಲ್ಲಿ ಇಲ್ಲ. ಆದರೆ ಒಂದೆರಡು ಸಿನಿಮಾ ಮಾಡಿದ ಯುವ ನಟರು ಕೆಲವರು ಡ್ರಗ್ಸ್ಗೆ ದಾಸರಾಗಿದ್ದಾರೆ. ದುಡ್ಡಿನ ವ್ಯಾಮೋಹ, ಹಣದ ಆಸೆಗೆ ಬಿದ್ದು ಕೆಲವರು ಮಾಫಿಯಾದ ಒಳಕ್ಕೆ ಸೇರಿದ್ದಾರೆ. ಕೊಕೇನ್ ರೀತಿಯ ಅಪಾಯಕಾರಿ ಮಾದಕ ವಸ್ತು ಸಹ ಚಂದನವನ ನಟ-ನಟಿಯರ ಕೈಗೆ ಎಟುಕುತ್ತಿದೆ ಎಂದು ಶಾಕಿಂಗ್ ಅಂಶ ಬಹಿರಂಗಪಡಿಸಿದ್ದಾರೆ ಇಂದ್ರಜಿತ್.

ಇಷ್ಟೇ ಅಲ್ಲದೆ ಯಾರೆಲ್ಲಾ ಈ ಮಾಫಿಯಾದಲ್ಲಿದ್ದಾರೆ, ಯಾರೆಲ್ಲಾ ದಾಸರಾಗಿದ್ದಾರೆ ಎಂಬುದನ್ನು ನಾನು ಬೇಕಾದರೆ ಬಹಿರಂಗಪಡಿಸುತ್ತೇನೆ. ಆದರೆ ಪೊಲೀಸರು ನನಗೆ ಸೂಕ್ತ ರಕ್ಷಣೆ ಕೊಡುಬೇಕು ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
ಇತ್ತೀಚಿಗೆ ನಿಧನರಾದ 35 ವರ್ಷ ವಯಸ್ಸಿನ ನಟನ ಸಾವಿನ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್, ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಾರೆ ಎಂದರೆ ಏನು ಕಾರಣ?, ಆ ನಟನ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಯಾಕೆ ಮಾಡಿಸಿಲ್ಲ? ಪರೀಕ್ಷೆ ಮಾಡಿಸಿದ್ದರೆ ಎಲ್ಲಾ ಬಯಲಾಗುತ್ತಿತ್ತು. ಮರಣೋತ್ತರ ಪರೀಕ್ಷೆ ನಡೆಸದಂತೆ ಪೊಲೀಸರಿಗೆ ರಾಜಕೀಯ ಒತ್ತಡವಿತ್ತು. ಯಾವ ರಾಜಕೀಯ ವ್ಯಕ್ತಿ ಒತ್ತಡ ಹಾಕಿದ್ದಾರೆ ಎನ್ನುವುದು ಗೊತ್ತಿದೆ" ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm