ಬ್ರೇಕಿಂಗ್ ನ್ಯೂಸ್
05-06-21 11:14 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 05: ರಾಜ್ಯಕ್ಕೆ ಮುಂಗಾರು ಪ್ರವೇಶವಾವಾಗಿದ್ದು, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶುಕ್ರವಾರ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡನ್ನು ಪ್ರವೇಶಿಸಿರುವ ನೈಋತ್ಯ ಮುಂಗಾರು ಜೂನ್ 05ರಂದು ಉತ್ತರ ಒಳನಾಡಿನ ಪ್ರದೇಶ ತಲುಪಲಿದೆ.ಆ ಮೂಲಕ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾತ್ರಿ 10ಗಂಟೆಯವರೆಗೆ ನಗರದ ಮಾರಪ್ಪನಪಾಳ್ಯದಲ್ಲಿ ಅಧಿಕ ಮಳೆ ಸುರಿದಿದೆ, 72 ಮಿ.ಮೀನಷ್ಟು ಮಳೆಯಾಗಿದೆ. ಸಾರಕ್ಕಿಯಲ್ಲಿ 63, ಬಸವನಗುಡಿ, ಅಟ್ಟೂರಿನಲ್ಲಿ 49, ವಿದ್ಯಾರಣ್ಯಪುರದಲ್ಲಿ 41, ಎಚ್ಎಸ್ಆರ್ ಲೇಔಟ್ನಲ್ಲಿ 38.5 ಮಿ.ಮೀನಷ್ಟು ಮಳೆಯಾಗಿದೆ.

ನಾಲ್ಕು ದಿನ ತಡವಾಗಿ ಮುಂಗಾರು;
ವಾಡಿಕೆಯಂತೆ ಜೂನ್ 1ರಂದೇ ರಾಜ್ಯ ಪ್ರವೇಶಿಸಬೇಕಿದ್ದ, ಮುಂಗಾರು ಮಾರುತಗಳು ನಾಲ್ಕು ದಿನ ತಡವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗವನ್ನು ಪ್ರವೇಶಿಸಿದೆ. ಶನಿವಾರ ಉತ್ತರ ಒಳನಾಡನ್ನು ಹಾದು ಹೋಗುವ ಮೂಲಕ ಈ ಮಾರುಗಳು ಇಡೀ ರಾಜ್ಯವನ್ನು ಆವರಿಸಲಿವೆ.
ಮುಂಗಾರು ಅರಂಭವಾದ ಮೊದಲ ದಿನವೇ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ದಾಖಲಾಗಿದೆ.ಇದೇ ರೀತಿ ಜೂನ್ 6ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಕಡೆಗಳಲ್ಲಿ ಗುಡುಗು ಮತ್ತು ಗಾಳಿ ಸಹಿತ ಮಳೆ ಮುಂದುವರೆಯಲಿದೆ.


ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್
ಜೂನ್ 5ರಂದು ಅತ್ಯಧಿಕ ಮಳೆ ಬೀಳುವುದರಿಂದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಬೆಂಗಳೂರಲ್ಲಿ ಅಧಿಕ ಮಳೆ
ನಗರದಲ್ಲಿ ಶುಕ್ರವಾರ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ, ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನದ ನಂತರ ಶುರುವಾದ ಮಳೆ ಕೆಲ ಕಾಲ ಜೋರಾಗಿ ಅಬ್ಬರಿಸಿತು. ಇದರಿಂದ ಜೆಪಿನಗರ 6ನೇ ಹಂತ, ಜಯನಗರ 5ನೇ ಬ್ಲಾಕ್ನ ರಸ್ತೆಗಳಲ್ಲಿ ನಾಲ್ಕು ಕಡೆ ರದ ರೆಂಬೆಗಳು ಮುರಿದು ಬಿದ್ದಿವೆ. ರಾಜ್ಯದಲ್ಲಿ ಮುಂಗಾರು ಪ್ರವೇಶವಾದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಜೂನ್ 7ರವರೆಗೂ ಮಳೆ ಮುಂದುವರೆಯಲಿದೆ.
Monsoon has entered the state as per the usual time of June first week. The monsoon clouds that arrived in Kerala on Thursday have entered Karwar of Uttara Kannada district. Many districts including Bengaluru received copious amounts of rain on June 4.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm