ಬ್ರೇಕಿಂಗ್ ನ್ಯೂಸ್
07-06-21 11:42 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಮಾಜಿ ಸಚಿವ, ರಾಷ್ಟ್ರೀಯ ಚಿಂತನೆ ಮತ್ತು ಸಮಾಜವಾದಿ ಪರ ಲೇಖಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್ (94) ತಮ್ಮ ವಯೋಸಹಜ ಕಾಯಿಲೆಯಿಂದ ಗಂಗಾನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
2008ರಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಮತ್ತು ಹಜ್ ಖಾತೆ ಸಚಿವರಾಗಿದ್ದ ಮುಮ್ತಾಜ್ ಆಲಿ ಖಾನ್, ವಿವಿಧ ಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು. ವಿಚಾರಪೂರ್ಣ ಅಂಕಣಗಳಿಂದಾಗಿ ಅವರು ಜನಮಾನಸದಲ್ಲಿ ಹೆಚ್ಚು ಪರಿಚಿತರಾಗಿದ್ದರು. ಖಾನ್ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.
ಕಳೆದ 30 ವರ್ಷಗಳಿಂದ ಬೆಂಗಳೂರಿನ ಆರ್.ಟಿ. ನಗರದಲ್ಲಿ ಅನುದಾನ ರಹಿತ ಶಾಲೆ ನಡೆಸುತ್ತಿದ್ದ ಮುಮ್ತಾಜ್ ಆಲಿ ಖಾನ್, ಅಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮಕ್ಕಳಿಗೆ ಉಚಿತವಾಗಿ ಕೊಡುತ್ತಿದ್ದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ, ಸಮವಸ್ತ್ರ, ಪಠ್ಯಪುಸ್ತಕಗಳನ್ನೂ ತಮ್ಮದೇ ಖರ್ಚಿನಲ್ಲಿ ಒದಗಿಸುತ್ತಿದ್ದರು. ಅವರ ಪತ್ನಿ ಈ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್, 1982ರಲ್ಲಿ ನಿವೃತ್ತಿಯಾಗಿದ್ದರು. ಬಳಿಕ ಸಲಾಮತ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಎಂಬ ಹೆಸರಲ್ಲಿ ಶಾಲೆ ನಡೆಸುತ್ತಿದ್ದರು. 2008ರಲ್ಲಿ ಅವರ ಮಗ ನೂರ್ ಅಹ್ಮದ್ 18ನೇ ವರ್ಷದಲ್ಲಿ ಅಕಾಲ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ನೂರ್ ಅಹ್ಮದ್ ಆಲಿಖಾನ್ ಸ್ಮಾರಕ ವಿದ್ಯಾಸಂಸ್ಥೆ ಎಂದು ಮರು ನಾಮಕರಣ ಮಾಡಿದ್ದರು.
Professor Mumtaz Ali Kahan(98), who was a former minority, hajj and waqf minister, and the district in-charge minister of Chikkaballapur district, passed away on Monday.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm