ಬ್ರೇಕಿಂಗ್ ನ್ಯೂಸ್
07-06-21 11:42 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಮಾಜಿ ಸಚಿವ, ರಾಷ್ಟ್ರೀಯ ಚಿಂತನೆ ಮತ್ತು ಸಮಾಜವಾದಿ ಪರ ಲೇಖಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್ (94) ತಮ್ಮ ವಯೋಸಹಜ ಕಾಯಿಲೆಯಿಂದ ಗಂಗಾನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
2008ರಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಮತ್ತು ಹಜ್ ಖಾತೆ ಸಚಿವರಾಗಿದ್ದ ಮುಮ್ತಾಜ್ ಆಲಿ ಖಾನ್, ವಿವಿಧ ಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು. ವಿಚಾರಪೂರ್ಣ ಅಂಕಣಗಳಿಂದಾಗಿ ಅವರು ಜನಮಾನಸದಲ್ಲಿ ಹೆಚ್ಚು ಪರಿಚಿತರಾಗಿದ್ದರು. ಖಾನ್ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

ಕಳೆದ 30 ವರ್ಷಗಳಿಂದ ಬೆಂಗಳೂರಿನ ಆರ್.ಟಿ. ನಗರದಲ್ಲಿ ಅನುದಾನ ರಹಿತ ಶಾಲೆ ನಡೆಸುತ್ತಿದ್ದ ಮುಮ್ತಾಜ್ ಆಲಿ ಖಾನ್, ಅಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮಕ್ಕಳಿಗೆ ಉಚಿತವಾಗಿ ಕೊಡುತ್ತಿದ್ದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ, ಸಮವಸ್ತ್ರ, ಪಠ್ಯಪುಸ್ತಕಗಳನ್ನೂ ತಮ್ಮದೇ ಖರ್ಚಿನಲ್ಲಿ ಒದಗಿಸುತ್ತಿದ್ದರು. ಅವರ ಪತ್ನಿ ಈ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್, 1982ರಲ್ಲಿ ನಿವೃತ್ತಿಯಾಗಿದ್ದರು. ಬಳಿಕ ಸಲಾಮತ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಎಂಬ ಹೆಸರಲ್ಲಿ ಶಾಲೆ ನಡೆಸುತ್ತಿದ್ದರು. 2008ರಲ್ಲಿ ಅವರ ಮಗ ನೂರ್ ಅಹ್ಮದ್ 18ನೇ ವರ್ಷದಲ್ಲಿ ಅಕಾಲ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ನೂರ್ ಅಹ್ಮದ್ ಆಲಿಖಾನ್ ಸ್ಮಾರಕ ವಿದ್ಯಾಸಂಸ್ಥೆ ಎಂದು ಮರು ನಾಮಕರಣ ಮಾಡಿದ್ದರು.
Professor Mumtaz Ali Kahan(98), who was a former minority, hajj and waqf minister, and the district in-charge minister of Chikkaballapur district, passed away on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm