ಬ್ರೇಕಿಂಗ್ ನ್ಯೂಸ್
07-06-21 11:51 am Bangalore Correspondent ಕರ್ನಾಟಕ
Photo credits : DH Photo
ಬೆಂಗಳೂರು, ಜೂನ್ 7 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ.
ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ ಕುಮಾರ್ ಹಾಗೂ ನಾಗೇಶ್ ರಾವ್ ಗಾಯಗೊಂಡವರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಮಾನ ನಿಲ್ದಾಣದಲ್ಲಿ ವಿಸ್ತರಣೆ ಹಾಗೂ ಎರಡನೇ ಟರ್ಮಿನಲ್ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ನಿಲ್ದಾಣ ವ್ಯಾಪ್ತಿಯ ಜಾಗದಲ್ಲಿ ಹೊಸ ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿನಗಳಿಂದ ನಡೆಯುತ್ತಿತ್ತು.

ಕೆಲಸಕ್ಕೆ ಹಾಜರಾಗಿದ್ದ ಕಾರ್ಮಿಕರು, ಕೆಳ ಸೇತುವೆಯಲ್ಲಿ ಸೇರಿದ್ದರು. ರಸ್ತೆಗೆ ಬಳಿಯಬೇಕಾದ ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಈ ಸಂದರ್ಭ ಏಕಾಏಕಿ ಸ್ಫೋಟ ಸಂಭವಿಸಿದ್ದು ಬೆಂಕಿ ಹೊತ್ತಿಕೊಂಡಿದೆ. ಕೆಲ ಕ್ಷಣಗಳಲ್ಲೇ ಬೆಂಕಿ ಕೆನ್ನಾಲಗೆ ಇಡೀ ಕೆಳ ಸೇತುವೆಯನ್ನು ಆವರಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿ, ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಗುತ್ತಿಗೆ ವಹಿಸಿದ್ದ ಕಂಪನಿಯ ವಿರುದ್ಧ ಪೊಲೀಸರು ಎಫ್ಐಆರ್ ಮಾಡಿದ್ದು ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Six workers were wounded, two of them seriously, in a blast near the Kempegowda International Airport here on Sunday, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm