ಬ್ರೇಕಿಂಗ್ ನ್ಯೂಸ್
07-06-21 11:51 am Bangalore Correspondent ಕರ್ನಾಟಕ
Photo credits : DH Photo
ಬೆಂಗಳೂರು, ಜೂನ್ 7 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ.
ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ ಕುಮಾರ್ ಹಾಗೂ ನಾಗೇಶ್ ರಾವ್ ಗಾಯಗೊಂಡವರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಮಾನ ನಿಲ್ದಾಣದಲ್ಲಿ ವಿಸ್ತರಣೆ ಹಾಗೂ ಎರಡನೇ ಟರ್ಮಿನಲ್ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ನಿಲ್ದಾಣ ವ್ಯಾಪ್ತಿಯ ಜಾಗದಲ್ಲಿ ಹೊಸ ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿನಗಳಿಂದ ನಡೆಯುತ್ತಿತ್ತು.

ಕೆಲಸಕ್ಕೆ ಹಾಜರಾಗಿದ್ದ ಕಾರ್ಮಿಕರು, ಕೆಳ ಸೇತುವೆಯಲ್ಲಿ ಸೇರಿದ್ದರು. ರಸ್ತೆಗೆ ಬಳಿಯಬೇಕಾದ ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಈ ಸಂದರ್ಭ ಏಕಾಏಕಿ ಸ್ಫೋಟ ಸಂಭವಿಸಿದ್ದು ಬೆಂಕಿ ಹೊತ್ತಿಕೊಂಡಿದೆ. ಕೆಲ ಕ್ಷಣಗಳಲ್ಲೇ ಬೆಂಕಿ ಕೆನ್ನಾಲಗೆ ಇಡೀ ಕೆಳ ಸೇತುವೆಯನ್ನು ಆವರಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿ, ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಗುತ್ತಿಗೆ ವಹಿಸಿದ್ದ ಕಂಪನಿಯ ವಿರುದ್ಧ ಪೊಲೀಸರು ಎಫ್ಐಆರ್ ಮಾಡಿದ್ದು ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Six workers were wounded, two of them seriously, in a blast near the Kempegowda International Airport here on Sunday, police said.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm