ಬ್ರೇಕಿಂಗ್ ನ್ಯೂಸ್
07-06-21 11:51 am Bangalore Correspondent ಕರ್ನಾಟಕ
Photo credits : DH Photo
ಬೆಂಗಳೂರು, ಜೂನ್ 7 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ.
ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ ಕುಮಾರ್ ಹಾಗೂ ನಾಗೇಶ್ ರಾವ್ ಗಾಯಗೊಂಡವರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಮಾನ ನಿಲ್ದಾಣದಲ್ಲಿ ವಿಸ್ತರಣೆ ಹಾಗೂ ಎರಡನೇ ಟರ್ಮಿನಲ್ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ನಿಲ್ದಾಣ ವ್ಯಾಪ್ತಿಯ ಜಾಗದಲ್ಲಿ ಹೊಸ ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿನಗಳಿಂದ ನಡೆಯುತ್ತಿತ್ತು.
ಕೆಲಸಕ್ಕೆ ಹಾಜರಾಗಿದ್ದ ಕಾರ್ಮಿಕರು, ಕೆಳ ಸೇತುವೆಯಲ್ಲಿ ಸೇರಿದ್ದರು. ರಸ್ತೆಗೆ ಬಳಿಯಬೇಕಾದ ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಈ ಸಂದರ್ಭ ಏಕಾಏಕಿ ಸ್ಫೋಟ ಸಂಭವಿಸಿದ್ದು ಬೆಂಕಿ ಹೊತ್ತಿಕೊಂಡಿದೆ. ಕೆಲ ಕ್ಷಣಗಳಲ್ಲೇ ಬೆಂಕಿ ಕೆನ್ನಾಲಗೆ ಇಡೀ ಕೆಳ ಸೇತುವೆಯನ್ನು ಆವರಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿ, ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಗುತ್ತಿಗೆ ವಹಿಸಿದ್ದ ಕಂಪನಿಯ ವಿರುದ್ಧ ಪೊಲೀಸರು ಎಫ್ಐಆರ್ ಮಾಡಿದ್ದು ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Six workers were wounded, two of them seriously, in a blast near the Kempegowda International Airport here on Sunday, police said.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm