ಬ್ರೇಕಿಂಗ್ ನ್ಯೂಸ್
07-06-21 05:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 07; ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ.
ಕೋರೋನಾ ಹಿನ್ನಲೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಬಸ್ಗಳು ರಸ್ತೆಗಿಳಿದಿಲ್ಲ. ಬಸ್ಗಳು ಕಾರ್ಯಚರಣೆ ಆಗದ ಹಿನ್ನಲೆ ನಾಲ್ಕು ನಿಗಮಗಳಿಗೆ 560 ಕೋಟಿ ರೂ. ನಷ್ಟವಾಗಿದೆ. ಅಲ್ಲದೇ ಈ ಹಿಂದೆ ನೌಕರರು ಮುಷ್ಕರ ನಡೆಸಿದ್ದರ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಇದನ್ನು ಚೇತರಿಸಿಕೊಳ್ಳುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಿಂದ ಈಗ ಮತ್ತಷ್ಟು ಸಾರಿಗೆ ಸಂಸ್ಥೆಗೆ ನಷ್ಟವಾಗಿದೆ.

ಕೊರೋನಾ ಎರಡನೇ ಅಲೆಯಿಂದ ಯಾವ ಯಾವ ನಿಗಮಗಳಿಗೆ ಎಷ್ಟು ನಷ್ಟ? ಸಾರಿಗೆ ನೌಕರರು ಮುಷ್ಕರದಿಂದ ದಿನದ ನಷ್ಟವೆಷ್ಟು? ಒಂದು ದಿನ ಬಸ್ ನಿಂತರೆ ನಾಲ್ಕು ನಿಗಮಗಳಿಗೆ ನಷ್ಟ ಎಷ್ಟು? ಎನ್ನುವುದನ್ನು ನೋಡುವುದಾದರೆ ಒಂದು ದಿನ ಬಸ್ ಕಾರ್ಯಾಚರಣೆ ಸ್ಥಗಿತವಾದರೆ ನಾಲ್ಕು ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗುತ್ತದೆ.
ಪ್ರಸ್ತುತ ಬಿಎಂಟಿಸಿಯ ದಿನದ ಆದಾಯ ಸುಮಾರು 2.5 ರಿಂದ 3 ಕೋಟಿ ಇದೆ. ಲಾಕ್ಡೌನ್ ಘೋಷಣೆಯಾಗಿ 40 ದಿನ ಕಳೆದಿದೆ. ಇದರಿಂದ ಇಲ್ಲಿವರೆಗೆ ಬಿಎಂಟಿಸಿಗೆ 120 ಕೋಟಿ ರೂ. ನಷ್ಟವಾಗಿದೆ. ಕೆಎಸ್ಆರ್ಟಿಸಿ ನಿತ್ಯದ ಆದಾಯ 7 ಕೋಟಿ ರೂ. ಇದ್ದು, 40 ದಿನಕ್ಕೆ ಕೆಎಸ್ಆರ್ಟಿಸಿ ಗೆ ಒಟ್ಟು 280 ಕೋಟಿ ರೂ. ನಷ್ಟವಾಗಿದೆ.
ವಾಯುವ್ಯ ಸಾರಿಗೆ ನಿಮಗದ ಪ್ರಸ್ತುತ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ವಾಯುವ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ. ಈಶಾನ್ಯ ಸಾರಿಗೆ ನಿಗಮದ ಪ್ರಸ್ತುತ ನಿತ್ಯ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ಈಶಾನ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm