ಬ್ರೇಕಿಂಗ್ ನ್ಯೂಸ್
07-06-21 05:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 07; ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ.
ಕೋರೋನಾ ಹಿನ್ನಲೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಬಸ್ಗಳು ರಸ್ತೆಗಿಳಿದಿಲ್ಲ. ಬಸ್ಗಳು ಕಾರ್ಯಚರಣೆ ಆಗದ ಹಿನ್ನಲೆ ನಾಲ್ಕು ನಿಗಮಗಳಿಗೆ 560 ಕೋಟಿ ರೂ. ನಷ್ಟವಾಗಿದೆ. ಅಲ್ಲದೇ ಈ ಹಿಂದೆ ನೌಕರರು ಮುಷ್ಕರ ನಡೆಸಿದ್ದರ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಇದನ್ನು ಚೇತರಿಸಿಕೊಳ್ಳುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಿಂದ ಈಗ ಮತ್ತಷ್ಟು ಸಾರಿಗೆ ಸಂಸ್ಥೆಗೆ ನಷ್ಟವಾಗಿದೆ.

ಕೊರೋನಾ ಎರಡನೇ ಅಲೆಯಿಂದ ಯಾವ ಯಾವ ನಿಗಮಗಳಿಗೆ ಎಷ್ಟು ನಷ್ಟ? ಸಾರಿಗೆ ನೌಕರರು ಮುಷ್ಕರದಿಂದ ದಿನದ ನಷ್ಟವೆಷ್ಟು? ಒಂದು ದಿನ ಬಸ್ ನಿಂತರೆ ನಾಲ್ಕು ನಿಗಮಗಳಿಗೆ ನಷ್ಟ ಎಷ್ಟು? ಎನ್ನುವುದನ್ನು ನೋಡುವುದಾದರೆ ಒಂದು ದಿನ ಬಸ್ ಕಾರ್ಯಾಚರಣೆ ಸ್ಥಗಿತವಾದರೆ ನಾಲ್ಕು ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗುತ್ತದೆ.
ಪ್ರಸ್ತುತ ಬಿಎಂಟಿಸಿಯ ದಿನದ ಆದಾಯ ಸುಮಾರು 2.5 ರಿಂದ 3 ಕೋಟಿ ಇದೆ. ಲಾಕ್ಡೌನ್ ಘೋಷಣೆಯಾಗಿ 40 ದಿನ ಕಳೆದಿದೆ. ಇದರಿಂದ ಇಲ್ಲಿವರೆಗೆ ಬಿಎಂಟಿಸಿಗೆ 120 ಕೋಟಿ ರೂ. ನಷ್ಟವಾಗಿದೆ. ಕೆಎಸ್ಆರ್ಟಿಸಿ ನಿತ್ಯದ ಆದಾಯ 7 ಕೋಟಿ ರೂ. ಇದ್ದು, 40 ದಿನಕ್ಕೆ ಕೆಎಸ್ಆರ್ಟಿಸಿ ಗೆ ಒಟ್ಟು 280 ಕೋಟಿ ರೂ. ನಷ್ಟವಾಗಿದೆ.
ವಾಯುವ್ಯ ಸಾರಿಗೆ ನಿಮಗದ ಪ್ರಸ್ತುತ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ವಾಯುವ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ. ಈಶಾನ್ಯ ಸಾರಿಗೆ ನಿಗಮದ ಪ್ರಸ್ತುತ ನಿತ್ಯ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ಈಶಾನ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm