ಬ್ರೇಕಿಂಗ್ ನ್ಯೂಸ್
07-06-21 05:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 07; ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ.
ಕೋರೋನಾ ಹಿನ್ನಲೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಬಸ್ಗಳು ರಸ್ತೆಗಿಳಿದಿಲ್ಲ. ಬಸ್ಗಳು ಕಾರ್ಯಚರಣೆ ಆಗದ ಹಿನ್ನಲೆ ನಾಲ್ಕು ನಿಗಮಗಳಿಗೆ 560 ಕೋಟಿ ರೂ. ನಷ್ಟವಾಗಿದೆ. ಅಲ್ಲದೇ ಈ ಹಿಂದೆ ನೌಕರರು ಮುಷ್ಕರ ನಡೆಸಿದ್ದರ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಇದನ್ನು ಚೇತರಿಸಿಕೊಳ್ಳುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಿಂದ ಈಗ ಮತ್ತಷ್ಟು ಸಾರಿಗೆ ಸಂಸ್ಥೆಗೆ ನಷ್ಟವಾಗಿದೆ.

ಕೊರೋನಾ ಎರಡನೇ ಅಲೆಯಿಂದ ಯಾವ ಯಾವ ನಿಗಮಗಳಿಗೆ ಎಷ್ಟು ನಷ್ಟ? ಸಾರಿಗೆ ನೌಕರರು ಮುಷ್ಕರದಿಂದ ದಿನದ ನಷ್ಟವೆಷ್ಟು? ಒಂದು ದಿನ ಬಸ್ ನಿಂತರೆ ನಾಲ್ಕು ನಿಗಮಗಳಿಗೆ ನಷ್ಟ ಎಷ್ಟು? ಎನ್ನುವುದನ್ನು ನೋಡುವುದಾದರೆ ಒಂದು ದಿನ ಬಸ್ ಕಾರ್ಯಾಚರಣೆ ಸ್ಥಗಿತವಾದರೆ ನಾಲ್ಕು ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗುತ್ತದೆ.
ಪ್ರಸ್ತುತ ಬಿಎಂಟಿಸಿಯ ದಿನದ ಆದಾಯ ಸುಮಾರು 2.5 ರಿಂದ 3 ಕೋಟಿ ಇದೆ. ಲಾಕ್ಡೌನ್ ಘೋಷಣೆಯಾಗಿ 40 ದಿನ ಕಳೆದಿದೆ. ಇದರಿಂದ ಇಲ್ಲಿವರೆಗೆ ಬಿಎಂಟಿಸಿಗೆ 120 ಕೋಟಿ ರೂ. ನಷ್ಟವಾಗಿದೆ. ಕೆಎಸ್ಆರ್ಟಿಸಿ ನಿತ್ಯದ ಆದಾಯ 7 ಕೋಟಿ ರೂ. ಇದ್ದು, 40 ದಿನಕ್ಕೆ ಕೆಎಸ್ಆರ್ಟಿಸಿ ಗೆ ಒಟ್ಟು 280 ಕೋಟಿ ರೂ. ನಷ್ಟವಾಗಿದೆ.
ವಾಯುವ್ಯ ಸಾರಿಗೆ ನಿಮಗದ ಪ್ರಸ್ತುತ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ವಾಯುವ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ. ಈಶಾನ್ಯ ಸಾರಿಗೆ ನಿಗಮದ ಪ್ರಸ್ತುತ ನಿತ್ಯ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ಈಶಾನ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm