ಬ್ರೇಕಿಂಗ್ ನ್ಯೂಸ್
08-06-21 04:09 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 8: ಮಾಜಿ ಸಚಿವ, ಹಾನಗಲ್ ಶಾಸಕ ಸಿಎಂ ಉದಾಸಿ (85) ಅಲ್ಪಕಾಲದ ಅನಾರೋಗ್ಯದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಇಂದು (ಜೂನ್ 8) ಮಧ್ಯಾಹ್ನ ನಿಧನರಾಗಿದ್ದಾರೆ. ಜನತಾ ಪರಿವಾರ ಹಿನ್ನೆಲೆಯ ಉದಾಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಉದಾಸಿ ಸದ್ಯ ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರು.
ಉದಾಸಿಯವರ ಪೂರ್ತಿ ಹೆಸರು ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ ಎಂದಾಗಿದ್ದು, ಅವರು ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಉದಾಸಿಗೆ ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ. ಪುತ್ರ ಶಿವಕುಮಾರ ಉದಾಸಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

ಎಂಟನೆ ತರಗತಿ ವಿದ್ಯಾಭಾಸ ಮಾಡಿದ್ದ ಉದಾಸಿ, 1974ರಲ್ಲಿ ಹಾನಗಲ್ ಪುರಸಭೆ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. 1974ರಿಂದ 1980ರ ವರೆಗೆ ಪುರಸಭೆ ಅಧ್ಯಕ್ಷರಾಗಿದ್ದರು. 1983ರಲ್ಲಿ ಹಾನಗಲ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. 1985ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿದ್ದರು. 1989ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 1994ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಮೂರನೇ ಬಾರಿಗೆ ಶಾಸಕರಾಗಿದ್ದರು. 1999ರಲ್ಲಿ ಜೆಡಿಯುನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 2004 ಮತ್ತು 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ, 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಆರನೇ ಬಾರಿಗೆ ಗೆಲುವು ಸಾಧಿಸಿದ್ದರು.

ಅಷ್ಟೇ ಅಲ್ಲದೆ, ಸಿ.ಎಂ. ಉದಾಸಿ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. 1994ರಲ್ಲಿ ದಿವಂಗತ ಜೆ.ಎಚ್.ಪಟೇಲ್ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿದ್ದರು. 2004ರಲ್ಲಿ ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕೆಲಸ ಮಾಡಿದ್ದರು. ಜವಳಿ ಸಚಿವರಾಗಿ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
ರಾಜಕೀಯಕ್ಕೆ ಬರುವ ಮೊದಲು ಭತ್ತದ ವ್ಯಾಪಾರ ಮಾಡುತ್ತಿದ್ದ ಉದಾಸಿ, ನಂತರ ಹಾನಗಲ್ ಪಟ್ಟಣದಲ್ಲಿ ರೈಸ್ ಮಿಲ್ ಆರಂಭಿಸಿದ್ದರು. ಆಬಳಿಕ ಹಿರಿಯರ ಒತ್ತಾಯಕ್ಕೆ ಮಣಿದು ಪುರಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಮೂಲಕ ರಾಜಕೀಯ ರಂಗ ಪ್ರವೇಶಿಸಿದ್ದರು.
BJP MLA Hanagal Assembly constituency CM Udasi (85) died on Tuesday. He was hospitalized on May 25 Due to an illness and was undergoing treatment in the Intensive Care Unit.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm