ಗಾಲಿ ಜನಾರ್ಧನ ರೆಡ್ಡಿಗೂ ವಕ್ಕರಿಸಿದ ಕೊರೋನಾ!!

30-08-20 09:58 am       Headline Karnataka News Network   ಕರ್ನಾಟಕ

ಆರೋಗ್ಯ ಸಚಿವ ಶ್ರೀರಾಮುಲು ಅವರು ಕೊರೋನಾ ಸೋಂಕಿನಿಂದ ಗುಣಮುಖರಾದ ಬೆನ್ನಲೇ ಇದೀಗ ಜನಾರ್ದನ ರೆಡ್ಡಿ ಅವರಿಗೂ ಕೊರೋನಾ ವಕ್ಕರಿಸಿದೆ!!

ಬೆಂಗಳೂರು ಆಗಸ್ಟ್  30 : ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರಿಗೆ  ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ  ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನ್ಯಾಯಾಲಯದ ಅನುಮತಿ ದೊರೆತಿದ್ದ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿ ನಾಳೆ ಬಳ್ಳಾರಿಗೆ ತೆರಳಬೇಕಾಗಿತ್ತು. ಇದಕ್ಕೂ ಮುನ್ನ ಇಂದು ಸಂಜೆ ಕೊರೊನಾ ಪರೀಕ್ಷೆಗೆ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಈ ಬಗ್ಗೆ ರೆಡ್ಡಿ ತಮ್ಮ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.