ಬ್ರೇಕಿಂಗ್ ನ್ಯೂಸ್
09-06-21 11:19 pm Nagesh, Mysore ಕರ್ನಾಟಕ
ಮೈಸೂರು, ಜೂನ್ 9: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾ.ರಾ.ಮಹೇಶ್ ನಡುವಿನ ಕಿತ್ತಾಟ ಮುಂದುವರಿದಿದೆ. ನನ್ನ ವಿರುದ್ಧ ಭೂ ದಾಖಲೆಗಳಿದ್ದರೆ ತೋರಿಸಲಿ ಎನ್ನುವ ಸವಾಲಿಗೆ ರೋಹಿಣಿ ಸಿಂಧೂರಿ ಉತ್ತರ ಕೊಟ್ಟಿದ್ದಾರೆ. ವರ್ಗಾವಣೆಗೂ ಮುನ್ನ ಹೊರಡಿಸಿದ ಆದೇಶದ ಪ್ರತಿಗಳನ್ನು ಸಾಮಾಜಿಕ ಜಾಲತಾಣಗಳಿಗೆ ಹರಿಯ ಬಿಟ್ಟಿದ್ದು ರೋಹಿಣಿ ಸಿಂಧೂರಿ ಹೊಸ ದಾಳ ಉರುಳಿಸಿದ್ದಾರೆ.
ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ್ದ ಸಾ.ರಾ.ಮಹೇಶ್, ರೋಹಿಣಿ ಸಿಂಧೂರಿ ಮೈಸೂರು ಜಿಲ್ಲೆಯ ಒಂದೇ ಒಂದು ಗುಂಟೆ ಸರ್ಕಾರಿ ಜಮೀನನ್ನೂ ರಕ್ಷಣೆ ಮಾಡಿಲ್ಲ. ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಅಂತ ಚಾಲೆಂಜ್ ಮಾಡಿದ್ದರು. ಸಂಜೆ ಹೊತ್ತಿಗೆ ರೋಹಿಣಿ ಸಿಂಧೂರಿ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

ರೋಹಿಣಿ ಸಿಂಧೂರಿ ಮೈಸೂರಿನಿಂದ ನಿರ್ಗಮಿಸುವ ಮುನ್ನ ಮಾಡಿದ ಆದೇಶಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿವೆ. ರೋಹಿಣಿ ಸಿಂಧೂರಿ ಸಹಿಯುಳ್ಳ ನಾಲ್ಕು ಆದೇಶ ಪ್ರತಿಗಳು ಮಾಜಿ ಸಚಿವ ಸಾ.ರಾ. ಮಹೇಶ್ ನಿಜಬಣ್ಣವನ್ನು ಬಯಲು ಮಾಡಿದೆ.
ಮೈಸೂರು ತಾಲೂಕಿನ ಕೇರಗಳ್ಳಿ ಸರ್ವೇ ನಂ.115ರಲ್ಲಿ 129.2 ಎಕರೆ ಜಾಗವಿದೆ. ಆದರೆ 199 ಎಕರೆಗೆ ಆರ್ಟಿಸಿ ಮಾಡಿಕೊಡಲಾಗಿತ್ತು. ಹೆಚ್ಚುವರಿಯಾಗಿ ಜಾಗವೇ ಇಲ್ಲದೆ 61.18 ಎಕರೆಗೆ ಮಾಡಿಕೊಟ್ಟಿದ್ದ ಆರ್ಟಿಸಿಯನ್ನು ಜಿಲ್ಲಾಧಿಕಾರಿಯಾಗಿದ್ದ ಸಿಂಧೂರಿ ರದ್ದು ಮಾಡಿದ್ದಾರೆ. ಸಾರಾ ಮಹೇಶ್ ಆರೋಪಕ್ಕೆ ತಿರುಗೇಟು ನೀಡಿ ಮಂಗಳಾರತಿ ಮಾಡಿದ್ದಾರೆ.
ಇದಲ್ಲದೆ, ಲಿಂಗಾಂಬುದಿ ಪಾಳ್ಯದ ಸರ್ವೇ ನಂ. 124/2ರಲ್ಲಿರುವ 1.39 ಎಕರೆ ಜಾಗ ಕೃಷಿ ಉದ್ದೇಶಕ್ಕೆ ಮೀಸಲಾಗಿತ್ತು. ಆದ್ರೆ ಮುಡಾ ಅಧಿಕಾರಿಗಳು 2016ರ ಸಿಡಿಪಿ ಪ್ಲ್ಯಾನ್ನಲ್ಲಿ ಹಸಿರು ವಲಯವಾಗಿದ್ದ ಭೂಮಿಯನ್ನು ಹಳದಿ ವಲಯ ಅಂತ ಪರಿವರ್ತನೆ ಮಾಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ರೋಹಿಣಿ ಸಿಂಧೂರಿ ಭೂ ಪರಿವರ್ತನಾ ಆದೇಶ ರದ್ದುಪಡಿಸಿ ಭೂ ಮಾಫಿಯಾದವರಿಗೆ ಟಾಂಗ್ ಕೊಟ್ಟಿದ್ದರು.

ಮೈಸೂರಿನ ಸರ್ವೇ ನಂ.10/2ರಲ್ಲಿರುವ ಲಿಂಗಾಂಬುದಿ ಕೆರೆಯ ಬಳಿಯಲ್ಲಿ ಪ್ರಭಾವಿ ವ್ಯಕ್ತಿಯೊಬ್ಬರು ರೆಸಾರ್ಟ್ ನಿರ್ಮಿಸಲು ಉದ್ದೇಶಿಸಿದ್ದರು. ರೆಸಾರ್ಟ್ ನಿರ್ಮಿಸುವ ಸಲುವಾಗಿಯೇ ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರು. ಕೆರೆ ಸುತ್ತಲಿನ 75 ಮೀಟರ್ ಭೂಮಿ ಬಫರ್ ಝೋನ್ ಆಗಿರುವ ಹಿನ್ನೆಲೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಸುವುದನ್ನು ರದ್ದುಗೊಳಿಸಿ ರೋಹಿಣಿ ಸಿಂಧೂರಿ ಗಮನ ಸೆಳೆದಿದ್ದಾರೆ.
ಇನ್ನು ದಟ್ಟಗಳ್ಳಿಯ ಸರ್ವೇ ನಂ.123ರಲ್ಲಿ ಗೋಮಾಳದ ಪೈಕಿ 5 ಎಕರೆ ಜಮೀನನ್ನು ವ್ಯಕ್ತಿಯೊಬ್ಬರು ನಕಲಿ ದಾಖಲೆ ಸೃಷ್ಟಿಸಿ ಪಡೆದುಕೊಂಡಿದ್ದರು. ಆ ಜಾಗದ ಹರಾಜು ಪ್ರಕ್ರಿಯೆ ಮತ್ತು ಮಂಜೂರಾತಿ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಒಟ್ಟಾರೆ ವರ್ಗಾವಣೆಯಾದ ದಿನವೇ ರೋಹಿಣಿ ಸಿಂಧೂರಿ ನಾಲ್ಕು ಆದೇಶಗಳನ್ನು ಹೊರಡಿಸುವ ಮೂಲಕ ತಾನು ಭೂ ಮಾಫಿಯಾಕ್ಕೆ ಕೈ ಹಾಕಿದ್ದೆ. ಅದಕ್ಕಾಗಿ ರಾಜಕಾರಣಿಗಳು ಕಿರುಕುಳ ಕೊಡಲಾರಂಭಿಸಿದ್ದರು ಅನ್ನುವುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ.

ಒತ್ತುವರಿ ಸಾಬೀತಾದರೆ ರಾಜಕೀಯ ನಿವೃತ್ತಿ ಸವಾಲು:
ರೋಹಿಣಿ ಸಿಂಧೂರಿ ಕಡೆಯಿಂದ ದಾಖಲೆ ಬಿಡುಗಡೆಯಾಗುತ್ತಿದ್ದಂತೆ ಮುಖ ಉಳಿಸಿಕೊಳ್ಳಲು ಹೋರಾಟಕ್ಕಿಳಿದಿರುವ ಜೆಡಿಎಸ್ ಶಾಸಕ ಸಾರಾ ಮಹೇಶ್, ಸಾರಾ ಪೌಲ್ಟ್ರಿಯಲ್ಲಿ ಕೆರೆ ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮೈಸೂರು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಒಂದ್ವೇಳೆ, ಸುಳ್ಳು ಎಂದು ಸಾಬೀತಾದರೆ ರೋಹಿಣಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದಲ್ಲದೆ, ಇದೇ ವಿಚಾರದಲ್ಲಿ ಪ್ರತಿಭಟಿಸಿ ನಾಳೆ ಬೆಳಗ್ಗೆ ಹತ್ತರಿಂದ ನನ್ನ ಕಚೇರಿ ಮುಂದೆ ಒಂಟಿಯಾಗಿ ಪ್ರತಿಭಟನೆ ಕೂರುವುದಾಗಿ ಹೇಳಿದ್ದಾರೆ.
The former Deputy Commissioner. Rohini Sindhuri, whose recent transfer out of Mysuru is perceived to be the handiwork of the land mafia, on Wednesday released circulars of the action initiated by her to revoke certain land transactions that were prima facie in violation of the law.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm