ಬ್ರೇಕಿಂಗ್ ನ್ಯೂಸ್
10-06-21 10:53 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 10: ಲಾಕ್ಡೌನ್ ಹೇರಿದ ಬಳಿಕ ರಾಜ್ಯದಾದ್ಯಂತ ಪೊಲೀಸರು ವಶಕ್ಕೆ ಪಡೆದಿದ್ದ ವಾಹನಗಳನ್ನು ದಂಡ ಪಡೆದು ಬಿಟ್ಟು ಬಿಡುವಂತೆ ಹೈಕೋರ್ಟ್ ಆದೇಶ ಮಾಡಿದೆ. ಇದರಿಂದ ರಾಜ್ಯದಲ್ಲಿ ಒಂದೂವರೆ ಲಕ್ಷ ವಾಹನಗಳು ಪೊಲೀಸರ ಕೈಯಿಂದ ಬಿಡುಗಡೆ ಭಾಗ್ಯ ಪಡೆಯಲಿವೆ.
ಲಾಕ್ಡೌನ್ ಉಲ್ಲಂಘಿಸಿದ ನೆಪದಲ್ಲಿ ರಾಜ್ಯದಲ್ಲಿ ವಿವಿಧೆಡೆ ಪೊಲೀಸರು ಸಾರ್ವಜನಿಕರ ವಾಹನಗಳನ್ನು ಜಪ್ತಿ ಮಾಡಿ ಕೇಸು ದಾಖಲಿಸಿದ್ದರು. ಇದರಿಂದ ರಾಜ್ಯದಲ್ಲಿ ಅಂದಾಜು 1.51 ಲಕ್ಷ ವಾಹನಗಳು ಸೀಜ್ ಆಗಿದ್ದು ಅಡಕತ್ತರಿಗೆ ಸಿಲುಕಿದ್ದವು.
ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ವಶಕ್ಕೆ ಪಡೆದ ವಾಹನಗಳನ್ನು ದಂಡ ಪಡೆದು ಬಿಟ್ಟು ಬಿಡುವಂತೆ ಇದೀಗ ಕೋರ್ಟ್ ಸೂಚನೆ ನೀಡಿದೆ. ಇದರ ಪ್ರಕಾರ, 1.37 ಲಕ್ಷ ದ್ವಿಚಕ್ರ ವಾಹನಗಳು ತಲಾ 500 ರೂ. ದಂಡ ಭರಿಸಬೇಕು. 7400 ನಾಲ್ಕು ಚಕ್ರದ ವಾಹನಗಳು ಒಂದು ಸಾವಿರ ರೂ. ದಂಡ, 7100 ಇತರ ಮಾದರಿಯ ವಾಹನಗಳು ರೂ. 2 ಸಾವಿರ ದಂಡ ತೆರಬೇಕು. ಇದರ ಜೊತೆಗೆ ಸೆಕ್ಷನ್ 102(3) ಪ್ರಕಾರ ಬಾಂಡ್ ನೀಡಬೇಕಿದೆ.
ಬಾಂಡ್ ಪ್ರಕಾರ, ವಾಹನಗಳ ಮಾಲೀಕರು ಇನ್ನು ಯಾವುದೇ ರೀತಿಯಲ್ಲಿ ಲಾಕ್ಡೌನ್ ಆದೇಶವನ್ನು ಉಲ್ಲಂಘಿಸಬಾರದು ಎಂದು ಷರತ್ತು ಬರೆಸಿಕೊಂಡು ಪೊಲೀಸರು ವಾಹನಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ನ್ಯಾಯಾಧೀಶ ಅಭಯ್ ಶ್ರೀನಿವಾಸ್ ಓಕಾ ಮತ್ತು ಜಸ್ಟಿಸ್ ಅರವಿಂದ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ದೊಡ್ಡ ಮಟ್ಟದಲ್ಲಿ ವಾಹನಗಳು ಸೀಜ್ ಆಗಿರುವುದರಿಂದ ಅದನ್ನು ಪಾರ್ಕ್ ಮಾಡಿ ಇಟ್ಟುಕೊಳ್ಳುವುದು ಕಷ್ಟವಾಗಿದ್ದಲ್ಲದೆ, ಲಕ್ಷಾಂತರ ಸಂಖ್ಯೆಯ ವಾಹನಗಳ ಕೇಸನ್ನು ನ್ಯಾಯಾಲಯಕ್ಕೆ ಹಸ್ತಾಂತರ ಮಾಡಿದರೆ ಅದನ್ನು ಪರಿಹರಿಸುವುದು ಸುದೀರ್ಘ ಸಮಯ ತೆಗೆದುಕೊಳ್ಳುತ್ತದೆ ಎನ್ನುವ ದೃಷ್ಟಿಯಿಂದ ರಾಜ್ಯ ಸರಕಾರವೇ ಹೈಕೋರ್ಟಿಗೆ ಮನವಿ ಮಾಡಿತ್ತು. ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ದಂಡ ಪಡೆದು ವಾಹನ ರಿಲೀಸ್ ಮಾಡಲು ಅವಕಾಶ ನೀಡುವಂತೆ ಕೇಳಿಕೊಂಡಿತ್ತು.
ಸಾಮಾನ್ಯವಾಗಿ ವಾಹನಗಳ ಮಾಲೀಕರು ಕೋರ್ಟಿಗೆ ಅರ್ಜಿ ಸಲ್ಲಿಸಿ, ಬಿಡಿಸಿಕೊಳ್ಳುವ ಪ್ರಕ್ರಿಯೆ ನಡೆಸಬೇಕು. ಅದಕ್ಕೆ ಸಮಯವೂ ಹಿಡಿಯುತ್ತದೆ. ವಾಹನಗಳ ಮಾಲೀಕರ ವಿರುದ್ಧ ಪೊಲೀಸರು ಸೆಕ್ಷನ್ 188 (ಪೊಲೀಸರ ಸೂಚನೆ ಪಾಲಿಸದಿರುವುದು) ಮತ್ತು ಇದರ ಜೊತೆಗೆ 2005 ರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸೆಕ್ಷನ್ 51(1) ಬಿ ಅಡಿ (ಸರಕಾರದ ಆದೇಶ ಉಲ್ಲಂಘನೆ) ಪ್ರಕರಣ ದಾಖಲಿಸಿರುತ್ತಾರೆ. ಈ ಸೆಕ್ಷನ್ ಅಡಿ ಆರೋಪಗಳಿಗೆ ಆರು ತಿಂಗಳು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ಇರುತ್ತದೆ
In a partial relief to owners of around 1.51 lakh motor vehicles seized for violation of the recent lockdown norms across the State, the High Court of Karnataka on Tuesday permitted the jurisdictional police to release the vehicles by collecting a tentative fine amount as deposit.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm