ಬ್ರೇಕಿಂಗ್ ನ್ಯೂಸ್
10-06-21 10:53 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 10: ಲಾಕ್ಡೌನ್ ಹೇರಿದ ಬಳಿಕ ರಾಜ್ಯದಾದ್ಯಂತ ಪೊಲೀಸರು ವಶಕ್ಕೆ ಪಡೆದಿದ್ದ ವಾಹನಗಳನ್ನು ದಂಡ ಪಡೆದು ಬಿಟ್ಟು ಬಿಡುವಂತೆ ಹೈಕೋರ್ಟ್ ಆದೇಶ ಮಾಡಿದೆ. ಇದರಿಂದ ರಾಜ್ಯದಲ್ಲಿ ಒಂದೂವರೆ ಲಕ್ಷ ವಾಹನಗಳು ಪೊಲೀಸರ ಕೈಯಿಂದ ಬಿಡುಗಡೆ ಭಾಗ್ಯ ಪಡೆಯಲಿವೆ.
ಲಾಕ್ಡೌನ್ ಉಲ್ಲಂಘಿಸಿದ ನೆಪದಲ್ಲಿ ರಾಜ್ಯದಲ್ಲಿ ವಿವಿಧೆಡೆ ಪೊಲೀಸರು ಸಾರ್ವಜನಿಕರ ವಾಹನಗಳನ್ನು ಜಪ್ತಿ ಮಾಡಿ ಕೇಸು ದಾಖಲಿಸಿದ್ದರು. ಇದರಿಂದ ರಾಜ್ಯದಲ್ಲಿ ಅಂದಾಜು 1.51 ಲಕ್ಷ ವಾಹನಗಳು ಸೀಜ್ ಆಗಿದ್ದು ಅಡಕತ್ತರಿಗೆ ಸಿಲುಕಿದ್ದವು.
ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ವಶಕ್ಕೆ ಪಡೆದ ವಾಹನಗಳನ್ನು ದಂಡ ಪಡೆದು ಬಿಟ್ಟು ಬಿಡುವಂತೆ ಇದೀಗ ಕೋರ್ಟ್ ಸೂಚನೆ ನೀಡಿದೆ. ಇದರ ಪ್ರಕಾರ, 1.37 ಲಕ್ಷ ದ್ವಿಚಕ್ರ ವಾಹನಗಳು ತಲಾ 500 ರೂ. ದಂಡ ಭರಿಸಬೇಕು. 7400 ನಾಲ್ಕು ಚಕ್ರದ ವಾಹನಗಳು ಒಂದು ಸಾವಿರ ರೂ. ದಂಡ, 7100 ಇತರ ಮಾದರಿಯ ವಾಹನಗಳು ರೂ. 2 ಸಾವಿರ ದಂಡ ತೆರಬೇಕು. ಇದರ ಜೊತೆಗೆ ಸೆಕ್ಷನ್ 102(3) ಪ್ರಕಾರ ಬಾಂಡ್ ನೀಡಬೇಕಿದೆ.
ಬಾಂಡ್ ಪ್ರಕಾರ, ವಾಹನಗಳ ಮಾಲೀಕರು ಇನ್ನು ಯಾವುದೇ ರೀತಿಯಲ್ಲಿ ಲಾಕ್ಡೌನ್ ಆದೇಶವನ್ನು ಉಲ್ಲಂಘಿಸಬಾರದು ಎಂದು ಷರತ್ತು ಬರೆಸಿಕೊಂಡು ಪೊಲೀಸರು ವಾಹನಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ನ್ಯಾಯಾಧೀಶ ಅಭಯ್ ಶ್ರೀನಿವಾಸ್ ಓಕಾ ಮತ್ತು ಜಸ್ಟಿಸ್ ಅರವಿಂದ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ದೊಡ್ಡ ಮಟ್ಟದಲ್ಲಿ ವಾಹನಗಳು ಸೀಜ್ ಆಗಿರುವುದರಿಂದ ಅದನ್ನು ಪಾರ್ಕ್ ಮಾಡಿ ಇಟ್ಟುಕೊಳ್ಳುವುದು ಕಷ್ಟವಾಗಿದ್ದಲ್ಲದೆ, ಲಕ್ಷಾಂತರ ಸಂಖ್ಯೆಯ ವಾಹನಗಳ ಕೇಸನ್ನು ನ್ಯಾಯಾಲಯಕ್ಕೆ ಹಸ್ತಾಂತರ ಮಾಡಿದರೆ ಅದನ್ನು ಪರಿಹರಿಸುವುದು ಸುದೀರ್ಘ ಸಮಯ ತೆಗೆದುಕೊಳ್ಳುತ್ತದೆ ಎನ್ನುವ ದೃಷ್ಟಿಯಿಂದ ರಾಜ್ಯ ಸರಕಾರವೇ ಹೈಕೋರ್ಟಿಗೆ ಮನವಿ ಮಾಡಿತ್ತು. ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ದಂಡ ಪಡೆದು ವಾಹನ ರಿಲೀಸ್ ಮಾಡಲು ಅವಕಾಶ ನೀಡುವಂತೆ ಕೇಳಿಕೊಂಡಿತ್ತು.
ಸಾಮಾನ್ಯವಾಗಿ ವಾಹನಗಳ ಮಾಲೀಕರು ಕೋರ್ಟಿಗೆ ಅರ್ಜಿ ಸಲ್ಲಿಸಿ, ಬಿಡಿಸಿಕೊಳ್ಳುವ ಪ್ರಕ್ರಿಯೆ ನಡೆಸಬೇಕು. ಅದಕ್ಕೆ ಸಮಯವೂ ಹಿಡಿಯುತ್ತದೆ. ವಾಹನಗಳ ಮಾಲೀಕರ ವಿರುದ್ಧ ಪೊಲೀಸರು ಸೆಕ್ಷನ್ 188 (ಪೊಲೀಸರ ಸೂಚನೆ ಪಾಲಿಸದಿರುವುದು) ಮತ್ತು ಇದರ ಜೊತೆಗೆ 2005 ರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸೆಕ್ಷನ್ 51(1) ಬಿ ಅಡಿ (ಸರಕಾರದ ಆದೇಶ ಉಲ್ಲಂಘನೆ) ಪ್ರಕರಣ ದಾಖಲಿಸಿರುತ್ತಾರೆ. ಈ ಸೆಕ್ಷನ್ ಅಡಿ ಆರೋಪಗಳಿಗೆ ಆರು ತಿಂಗಳು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ಇರುತ್ತದೆ
In a partial relief to owners of around 1.51 lakh motor vehicles seized for violation of the recent lockdown norms across the State, the High Court of Karnataka on Tuesday permitted the jurisdictional police to release the vehicles by collecting a tentative fine amount as deposit.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm