ಬ್ರೇಕಿಂಗ್ ನ್ಯೂಸ್
11-06-21 02:09 pm Headline Karnataka News Network ಕರ್ನಾಟಕ
ಗದಗ, ಜೂನ್ 11; ಕೋವಿಡ್ 2ನೇ ಅಲೆಯಿಂದಾಗಿ ಸಾವಿರಾರು ಜನರು ಇದುವರೆಗೂ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕಿನ ವಿರುದ್ಧದ ಲಸಿಕೆಗೆ ಈಗ ಭಾರೀ ಬೇಡಿಕೆ ಇದೆ. ಆದರೆ ಇಲ್ಲೊಂದು ಪ್ರದೇಶದಲ್ಲಿ ಲಸಿಕೆ ಬೇಡ ಎಂದು ಜನರು ಹೇಳುತ್ತಿದ್ದಾರೆ.
ಇದು ಗದಗ ಜಿಲ್ಲೆಯ ಮುಳಗುಂದದ ಬಳಿ ಇರುವ ದಾವಲ್ ಮಲ್ಲಿಕ್ ಪ್ರದೇಶ. ಇಲ್ಲಿ ಸುಮಾರು 500 ಜನರು ವಾಸವಾಗಿದ್ದಾರೆ. ಬಹುತೇಕ ಜನರು ಬಟ್ಟೆ ವ್ಯಾಪಾರಿಗಳು. ಈ ಪ್ರದೇಶದ ಜನರು ನಮಗೆ ಕೋವಿಡ್ ಲಸಿಕೆ ಬೇಡ ಎಂದು ಪಟ್ಟು ಹಿಡಿದಿದ್ದಾರೆ.
ಮೂರು ಬಾರಿ ಅಧಿಕಾರಿಗಳು ಈ ಪ್ರದೇಶಕ್ಕೆ ಹೋಗಿ ಜನರ ಮನವೊಲಿಸಲು ಸಾಧ್ಯವಾಗದೇ ವಾಪಸ್ ಬಂದಿದ್ದಾರೆ. ಇಲ್ಲಿಯ ತನಕ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ. ಜನರು "ನಮಗೆ ಲಸಿಕೆ ಬೇಡ, ದೇವರಿದ್ದಾನೆ" ಎಂದು ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ.

ಗ್ರಾಮ ಪಂಚಾಯಿತಿಯ ಸದಸ್ಯರು ಸಹ ಜನರನ್ನು ಭೇಟಿ ಮಾಡಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಆದರೆ ಜನರು ಮಾತ್ರ ಲಸಿಕೆ ಪಡೆಯಲು ತಯಾರಿಲ್ಲ. ಹೆಚ್ಚು ಒತ್ತಾಯ ಮಾಡಿದಾಗ ಲಸಿಕೆ ಹಾಕಿಸಿಕೊಂಡರೆ ಏನೂ ಆಗುವುದಿಲ್ಲ ಎಂದು 25 ಸಾವಿರ ರೂ. ಬಾಂಡ್ ನೀಡಿ ಆಗ ಹಾಕಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮೂರು ಬಾರಿ ಹೋದರೂ ಜನರು ಬೇರೆ-ಬೇರೆ ನೆಪ ಹೇಳಿ ಲಸಿಕೆ ಹಾಕಿಸಿಕೊಳ್ಳದೇ ವಾಪಸ್ ಕಳಿಸಿದ್ದಾರೆ. ಜನರ ಮನವೊಲಿಕೆ ಅಧಿಕಾರಿಗಳಿಗೆ ತಲೆನೋವಾಗಿದೆ. ಲಸಿಕೆ ಪಡೆದರೆ ಸಾವನ್ನಪ್ಪುತ್ತಾರೆ ಎಂಬ ಭಯವಿದೆ. ನಮ್ಮೊಂದಿಗೆ ದೇವರು ಇದ್ದಾನೆ. ನಮಗೆ ಏನೂ ಆಗೋಲ್ಲ. ಇಲ್ಲಿಗೆ ಕೋವಿಡ್ ಬಂದರೂ ನಮ್ಮನ್ನು ಸಾಯಿಸಲು ಆಗಲ್ಲ. ಸಾವಿರಾರು ಜನರ ನಂಬಿಕೆಗಳಿಸಿದ ದೇವರ ಸ್ಥಳದಲ್ಲಿ ನಾವಿದ್ದೇವೆ. ದೇವರು ನಮ್ಮನ್ನು ರಕ್ಷಣೆ ಮಾಡುತ್ತಾನೆ ಎಂದು ಜನರು ಹೇಳುತ್ತಿದ್ದಾರೆ.
ಮುಳಗುಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಈ ಪ್ರದೇಶ ಬರುತ್ತದೆ. ಕೇಂದ್ರದ ವೈದ್ಯಕೀಯ ಅಧಿಕಾರಿ ಮಾತನಾಡಿದ್ದು, "ನಾವು ಜನರ ಮನವೊಲಿಕೆ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಲಸಿಕೆ ಕುರಿತು ಅವರಲ್ಲಿ ತಪ್ಪು ಕಲ್ಪನೆಗಳಿವೆ" ಎಂದು ಹೇಳಿದ್ದಾರೆ.
However, irrespective of the villagers’ claim, the health and family welfare department made a bid to convince them to take the jab, but to no avail.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm