ಬ್ರೇಕಿಂಗ್ ನ್ಯೂಸ್
11-06-21 02:09 pm Headline Karnataka News Network ಕರ್ನಾಟಕ
ಗದಗ, ಜೂನ್ 11; ಕೋವಿಡ್ 2ನೇ ಅಲೆಯಿಂದಾಗಿ ಸಾವಿರಾರು ಜನರು ಇದುವರೆಗೂ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕಿನ ವಿರುದ್ಧದ ಲಸಿಕೆಗೆ ಈಗ ಭಾರೀ ಬೇಡಿಕೆ ಇದೆ. ಆದರೆ ಇಲ್ಲೊಂದು ಪ್ರದೇಶದಲ್ಲಿ ಲಸಿಕೆ ಬೇಡ ಎಂದು ಜನರು ಹೇಳುತ್ತಿದ್ದಾರೆ.
ಇದು ಗದಗ ಜಿಲ್ಲೆಯ ಮುಳಗುಂದದ ಬಳಿ ಇರುವ ದಾವಲ್ ಮಲ್ಲಿಕ್ ಪ್ರದೇಶ. ಇಲ್ಲಿ ಸುಮಾರು 500 ಜನರು ವಾಸವಾಗಿದ್ದಾರೆ. ಬಹುತೇಕ ಜನರು ಬಟ್ಟೆ ವ್ಯಾಪಾರಿಗಳು. ಈ ಪ್ರದೇಶದ ಜನರು ನಮಗೆ ಕೋವಿಡ್ ಲಸಿಕೆ ಬೇಡ ಎಂದು ಪಟ್ಟು ಹಿಡಿದಿದ್ದಾರೆ.
ಮೂರು ಬಾರಿ ಅಧಿಕಾರಿಗಳು ಈ ಪ್ರದೇಶಕ್ಕೆ ಹೋಗಿ ಜನರ ಮನವೊಲಿಸಲು ಸಾಧ್ಯವಾಗದೇ ವಾಪಸ್ ಬಂದಿದ್ದಾರೆ. ಇಲ್ಲಿಯ ತನಕ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ. ಜನರು "ನಮಗೆ ಲಸಿಕೆ ಬೇಡ, ದೇವರಿದ್ದಾನೆ" ಎಂದು ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ.
ಗ್ರಾಮ ಪಂಚಾಯಿತಿಯ ಸದಸ್ಯರು ಸಹ ಜನರನ್ನು ಭೇಟಿ ಮಾಡಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಆದರೆ ಜನರು ಮಾತ್ರ ಲಸಿಕೆ ಪಡೆಯಲು ತಯಾರಿಲ್ಲ. ಹೆಚ್ಚು ಒತ್ತಾಯ ಮಾಡಿದಾಗ ಲಸಿಕೆ ಹಾಕಿಸಿಕೊಂಡರೆ ಏನೂ ಆಗುವುದಿಲ್ಲ ಎಂದು 25 ಸಾವಿರ ರೂ. ಬಾಂಡ್ ನೀಡಿ ಆಗ ಹಾಕಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮೂರು ಬಾರಿ ಹೋದರೂ ಜನರು ಬೇರೆ-ಬೇರೆ ನೆಪ ಹೇಳಿ ಲಸಿಕೆ ಹಾಕಿಸಿಕೊಳ್ಳದೇ ವಾಪಸ್ ಕಳಿಸಿದ್ದಾರೆ. ಜನರ ಮನವೊಲಿಕೆ ಅಧಿಕಾರಿಗಳಿಗೆ ತಲೆನೋವಾಗಿದೆ. ಲಸಿಕೆ ಪಡೆದರೆ ಸಾವನ್ನಪ್ಪುತ್ತಾರೆ ಎಂಬ ಭಯವಿದೆ. ನಮ್ಮೊಂದಿಗೆ ದೇವರು ಇದ್ದಾನೆ. ನಮಗೆ ಏನೂ ಆಗೋಲ್ಲ. ಇಲ್ಲಿಗೆ ಕೋವಿಡ್ ಬಂದರೂ ನಮ್ಮನ್ನು ಸಾಯಿಸಲು ಆಗಲ್ಲ. ಸಾವಿರಾರು ಜನರ ನಂಬಿಕೆಗಳಿಸಿದ ದೇವರ ಸ್ಥಳದಲ್ಲಿ ನಾವಿದ್ದೇವೆ. ದೇವರು ನಮ್ಮನ್ನು ರಕ್ಷಣೆ ಮಾಡುತ್ತಾನೆ ಎಂದು ಜನರು ಹೇಳುತ್ತಿದ್ದಾರೆ.
ಮುಳಗುಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಈ ಪ್ರದೇಶ ಬರುತ್ತದೆ. ಕೇಂದ್ರದ ವೈದ್ಯಕೀಯ ಅಧಿಕಾರಿ ಮಾತನಾಡಿದ್ದು, "ನಾವು ಜನರ ಮನವೊಲಿಕೆ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಲಸಿಕೆ ಕುರಿತು ಅವರಲ್ಲಿ ತಪ್ಪು ಕಲ್ಪನೆಗಳಿವೆ" ಎಂದು ಹೇಳಿದ್ದಾರೆ.
However, irrespective of the villagers’ claim, the health and family welfare department made a bid to convince them to take the jab, but to no avail.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm